September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

ಬೆಳ್ತಂಗಡಿ: ಮೇಲಂತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಯುಕ್ತ ಮಾಡಿರುವ ‘ನಿಶಾನಿ’ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಜು.14ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಹಿಸಿದ್ದರು. ಕಾಂತಾವರ ಸರಕಾರಿ ಪ್ರೌಢ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿ ಹರಿಣಿ ಕಾರ್ಯಕ್ರಮ ಉದ್ಘಾಟಿಸಿದರು.

ಸ್ಮರಣ ಸಂಚಿಕೆಯನ್ನು ವೇಣೂರು ಎಸ್ ಡಿ ಎಂ ಐ ಟಿ ಐ ಕಾಲೇಜು ನಿವೃತ್ತ ಪ್ರಾಂಶುಪಾಲ ಸದಾನಂದ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಹರೀಶ್, ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಗ್ರಾಮ ಪಂಚಾಯತ್ ಸದಸ್ಯ ಚಂದ್ರ ರಾಜ್ ಭಾಗವಹಿಸಿದ್ದರು.

ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಕುಮಾರ್ ನಡಕ್ಕರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ನೂಜೋಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರವೀಣ್, ಶಾಲಾ ಮುಖ್ಯೋಪಾಧ್ಯಾಯಿನಿ ರೂಪ, ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಹರ್ಷ ಹೆಚ್.ಆರ್., ಸಮಿತಿಯ ಪದಾಧಿಕಾರಿಗಳು, ಊರವರು ಹಾಜರಿದ್ದರು.

Related posts

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ “ವಾಕ್-ಇನ್ ವಿದ್ವತ್” – ಎ ಸ್ಟೆಪ್ ಇಂಟು ಸಕ್ಸಸ್” ಕಾರ್ಯಕ್ರಮದ ಲೋಗೋ ಅನಾವರಣ

Suddi Udaya

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಆತ್ಮಹತ್ಯೆಗೆ ಯತ್ನಿಸಿದ್ದ ಕೊಕ್ಕಡದ ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಮೂಡುಬಿದಿರೆ: ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಹೂವಿನ ಪೂಜೆ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya
error: Content is protected !!