25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ, ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದಲ್ಲಿ ರಾತ್ರಿ ಸುರಿದ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಈ ಬಗ್ಗೆ ಸುದ್ದಿ ಉದಯ ಆನ್ ಲೈನ್ ವರದಿ ಪ್ರಕಟಿಸಿದ ಕೂಡಲೇ ಸ್ಪಂದಿಸಿದ ಗ್ರಾ.ಪಂ. ನವರು ಜೆಸಿಬಿ ಮುಖಾಂತರ ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ರವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಮುಗ್ರೋಡಿ ಕನ್ ಸ್ಟ್ರಕ್ಷನ್ ನವರಿಗೆ ತಿಳಿಸಿದಾಗ ಮಣ್ಣು ತೆರವು ಕಾರ್ಯಕ್ಕೆ ಸ್ಥಳಕ್ಕೆ ಎರಡೂ ಜೆಸಿಬಿ ಕಳುಹಿಸಿ ಮಣ್ಣು ತೆರವು ನಡೆಸಿದರು. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಪಂಚಾಯತ್ ಸದಸ್ಯೆ ಸುಚಿತ್ರ ಮುರ್ತಾಜೆ ಆಗಮಿಸಿ ಪರಿಶೀಲನೆ ನಡೆಸಿದರು.

Related posts

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya

ಸೌಜನ್ಯ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ: ಕುಸುಮಾವತಿಯವರೊಂದಿಗೆ ಮಾತುಕತೆ

Suddi Udaya

ಅಳದಂಗಡಿ: ಮಾಗ್ದೇಲಿನ್ ಪಿಂಟೋ ನಿಧನ

Suddi Udaya

ಉಜಿರೆ: ರೆಂಜಾಳ ಗೆಳಯರ ಬಳಗ ಹಾಗೂ ರೆಂಜಾಳ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ರಚನೆ

Suddi Udaya
error: Content is protected !!