July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

ನೆಲ್ಯಾಡಿ: ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರಂದು ನಸುಕಿನ ಜಾವ 2.30ರ ಸಮಯಕ್ಕೆ ಸಂಭವಿಸಿದೆ.

ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.

ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.

ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು, ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದು, ಮಣ್ಣಿನ ಕುಸಿತ ನಡೆಯುತ್ತಲೇ ಇದೆ. ಸದ್ಯದ ಮಟ್ಟಿಗೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

Related posts

ಅಕ್ರಮ ಗೋಸಾಗಾಟ : ತಡೆಯಲು ಬಂದವರ ಮೇಲೆ ಪಿಕಪ್ ಹರಿಸಿದ ದುಷ್ಕರ್ಮಿಗಳು

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಭೀಕರ ರಸ್ತೆ ಅಪಘಾತ; ಓರ್ವ ಯುವತಿಗೆ ಗಂಭೀರ ಗಾಯ

Suddi Udaya

ಇಂದಬೆಟ್ಟು : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೊಲೆರೋ

Suddi Udaya
error: Content is protected !!