25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

ಶಿಶಿಲ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಅಂಗಳಕ್ಕೆ ಬಂದು ದೇವಸ್ಥಾನದ ಒಳಗೆ ನುಗ್ಗಿದೆ.ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದೇವಸ್ಥಾನ ಪರಿಸರದಲ್ಲಿ ಆನೇಕ ಮನೆಗಳಿದ್ದು, ದೇವಸ್ಥಾನದ ಅಂಗಳ ತನಕ ನೀರು ಬಂದಿರುವುದರಿಂದ ಈ ಮನೆಯವರು ಭಯಭೀತರಾಗಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿಅಣೆಕಟ್ಟಿನಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿಂದ ಎನ್ನುತ್ತಾರೆ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಬಿ. ಅವರು. ಶಿಶಿಲ ಪೇಟೆಗೆ

ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ತಮ್ಮ ಮನೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಕೆಂಪೇಗೌಡ ಜಯಂತ್ಯುತ್ಸವ ಚಿತ್ರಕಲಾ ಸ್ಪರ್ಧೆ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ತನುಷ್ ಪ್ರಥಮ ಸ್ಥಾನ: ಅಭಿನಂದನೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳೆ ಮತ್ತು ಶಿಕ್ಷಣ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya

ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಪೂರ್ವಭಾವಿ ಸಭೆ

Suddi Udaya
error: Content is protected !!