July 23, 2026
ತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

ಶಿಶಿಲ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಅಂಗಳಕ್ಕೆ ಬಂದು ದೇವಸ್ಥಾನದ ಒಳಗೆ ನುಗ್ಗಿದೆ.ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದೇವಸ್ಥಾನ ಪರಿಸರದಲ್ಲಿ ಆನೇಕ ಮನೆಗಳಿದ್ದು, ದೇವಸ್ಥಾನದ ಅಂಗಳ ತನಕ ನೀರು ಬಂದಿರುವುದರಿಂದ ಈ ಮನೆಯವರು ಭಯಭೀತರಾಗಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿಅಣೆಕಟ್ಟಿನಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿಂದ ಎನ್ನುತ್ತಾರೆ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಬಿ. ಅವರು. ಶಿಶಿಲ ಪೇಟೆಗೆ

ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ತಮ್ಮ ಮನೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya

ಕಕ್ಯಪದವು; ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!