30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL ಟಿಂಕರಿಂಗ್ ವಿಜ್ಞಾನ ಲ್ಯಾಬ್” ಸಂಪೂರ್ಣ ಶಾಲೆಗೆ ಸೋಲಾರ್ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ , “ಸಮಾಜ ವಿಜ್ಞಾನ ಕ್ರಿಯೇಟಿವ್ ಕ್ಲಾಸ್” ಶಾಲೆಯ‌ ಸುತ್ತ-ಮುತ್ತ ಹಚ್ಚ ಹಸುರಾದ ಲಾನ್ ಅಳವಡಿಕೆ, Pot ನಲ್ಲಿ ಮತ್ತು ತೂಗು ಬುಟ್ಟಿಗಳಲ್ಲಿ ಬೆಳೆಸಲಾಗಿರುವ ನೂರಾರು ಬಗೆಯ ಅಲಂಕಾರಿಕ ಗಿಡಗಳು, ಎರಡು ಎಕರೆಯಲ್ಲಿ ಬೆಳೆಸಲಾಗುತ್ತಿರುವ ಅಡಿಕೆ ತೋಟ, ಅಕ್ಷರ ಕೈತೋಟ, ತರಕಾರಿ ತೋಟ , ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಆಕರ್ಷಣೆಯಾಗಿದೆ. ಮುಖ್ಯ ಶಿಕ್ಷಕರ ಮತ್ತು ಎಲ್ಲಾ ಶಿಕ್ಷಕರ ಶ್ರಮದ ಪ್ರತಿಫಲ 2024ನೇ ಸಾಲಿನ ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿಗೆ ಆಯ್ಕೆಗೊಂಡಿದ್ದು ಇದೇ ತಿಂಗಳ 27 ನೇ ತಾರೀಖು ರೂ 10,000 ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಲಿದೆ.

Related posts

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮುಂಡಾಜೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಜು.7: ಧರ್ಮಸ್ಥಳದಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಜ.3: ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya
error: Content is protected !!