23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ಚಾರ್ಮಾಡಿ ಗ್ರಾಮದ ತೋಟತ್ತಾಡಿಯ ಮುಖ್ಯ ರಸ್ತೆಯ ಸೇತುವೆಯ ಅಪಾಯದ ಹಂಚಿನಲ್ಲಿದ್ದು ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಳೆದ 70 ವರ್ಷಗಳಲ್ಲಿ ಇರುವಂತಹ ಸೇತುವೆಯು ಮಳೆಗೆ ಹಾನಿಯಾಗಿದ್ದು ಪಂಚಾಯತಿ ಸದಸ್ಯರು ಹಾಗೂ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರು ದುರಸ್ತಿಪಡಿಸುವ ಯಾವುದೇ ಕೆಲಸಗಳನ್ನು ಮಾಡದೆ ಕೇವಲ ಪೊಳ್ಳು ಭರವಸೆಯನ್ನು ನೀಡಿದ್ದಾರೆ.

ಇದೀಗ ಈ ಸೇತುವೆ ಅಪಾಯದಲ್ಲಿದ್ದು ಶಾಲೆ, ಕಾಲೇಜು ಹಾಗೂ ದೈನಂದಿನ ಕೆಲಸಕ್ಕೆ ಹೋಗುವಂತಹ ಜನರು ಈ ಸೇತುವೆ ಮೇಲೆ ಹೋಗುವಾಗ ಜೀವ ಭಯದಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆದ್ದರಿಂದ ಅನಾಹುತ ಆಗುವ ಮೊದಲೇ ಇದಕ್ಕೆ ಸಂಬಂಧಪಟ್ಟ ಪಂಚಾಯಿತಿ ಸದಸ್ಯರು ಹಾಗೂ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಶಾಶ್ವತವಾದ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಜಿ.ಎಸ್.ಟಿ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ: ಕಾಂಗ್ರೆಸ್ ಸರ್ಕಾರದ ತುಘಲಕ್ ನೀತಿ ಬಟಾ ಬಯಲು – ಹರೀಶ್ ಪೂಂಜ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಪ್ರಭಾರ ಶಿಕ್ಷಣಾಧಿಕಾರಿ ಕಾರಿನ ಮೇಲೆ ಮರ ಬಿದ್ದು ಹಾನಿ

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya
error: Content is protected !!