September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ಚಾರ್ಮಾಡಿ ಗ್ರಾಮದ ತೋಟತ್ತಾಡಿಯ ಮುಖ್ಯ ರಸ್ತೆಯ ಸೇತುವೆಯ ಅಪಾಯದ ಹಂಚಿನಲ್ಲಿದ್ದು ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಳೆದ 70 ವರ್ಷಗಳಲ್ಲಿ ಇರುವಂತಹ ಸೇತುವೆಯು ಮಳೆಗೆ ಹಾನಿಯಾಗಿದ್ದು ಪಂಚಾಯತಿ ಸದಸ್ಯರು ಹಾಗೂ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರು ದುರಸ್ತಿಪಡಿಸುವ ಯಾವುದೇ ಕೆಲಸಗಳನ್ನು ಮಾಡದೆ ಕೇವಲ ಪೊಳ್ಳು ಭರವಸೆಯನ್ನು ನೀಡಿದ್ದಾರೆ.

ಇದೀಗ ಈ ಸೇತುವೆ ಅಪಾಯದಲ್ಲಿದ್ದು ಶಾಲೆ, ಕಾಲೇಜು ಹಾಗೂ ದೈನಂದಿನ ಕೆಲಸಕ್ಕೆ ಹೋಗುವಂತಹ ಜನರು ಈ ಸೇತುವೆ ಮೇಲೆ ಹೋಗುವಾಗ ಜೀವ ಭಯದಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆದ್ದರಿಂದ ಅನಾಹುತ ಆಗುವ ಮೊದಲೇ ಇದಕ್ಕೆ ಸಂಬಂಧಪಟ್ಟ ಪಂಚಾಯಿತಿ ಸದಸ್ಯರು ಹಾಗೂ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಶಾಶ್ವತವಾದ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಸಾಮಾಜಿಕ ಜಾಲತಾಣದಲ್ಲಿ ಬಿಲ್ಲವ ಸಮಾಜದ ಮುಖಂಡ ಸತ್ಯಜಿತ್ ತೇಜೋವಧೆ ಮಾಡುತ್ತಿರುವುದನ್ನು ಖಂಡಿಸುತ್ತೇವೆ : ಎಂ.ಕೆ ಪ್ರಸಾದ್

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

Suddi Udaya

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳ ಉದ್ಘಾಟನೆ

Suddi Udaya
error: Content is protected !!