22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಉಜಿರೆಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತು.

ಜೆಸಿಐ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಸರಣಿ ತರಬೇತಿ ಕಾರ್ಯಕ್ರಮವನ್ನು, ಗ್ರಾಮ ಪಂಚಾಯತ್ ಉಜಿರೆಯ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು ಕಾರ್ಯಕ್ರಮವನ್ನು ಉದ್ಘಾಟಿಸಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯಕ್ರಮಗಳಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ವಲಯ ತರಬೇತುದರರು, ಘಟಕದ ಉಪಾಧ್ಯಕ್ಷರಾದ ಹೇಮಾವತಿ ಕೆ ಇವರು ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 40 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ವಹಿಸಿ, ಜೀವನದಲ್ಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿಯ ಮಹತ್ವ ವನ್ನು ವಿವರಿಸಿ ಎಲ್ಲರನ್ನು ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಚಂದ್ರಪ್ಪ ಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯನ್ನು ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆ ಆಹ್ವಾನವನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ, ಜೆಸಿ ವಾಣಿಯನ್ನು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ವಾಚಿಸಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷರಾದ ಪ್ರಸಾದ್ ಬಿ ಎಸ್ ಭಾಗವಹಿಸಿದರು. ಕಾರ್ಯದರ್ಶಿಗಳಾದ ಅನದೀಪ್ ಜೈನ್ ಇವರ ಧನ್ಯವಾದದೊಂದಿಗೆ ತರಬೇತಿ ಕಾರ್ಯಕ್ರಮ ಮುಕ್ತಯವಾಯಿತು.

Related posts

ತೆಂಕಕಾರಂದೂರು ಗ್ರಾಮದಲ್ಲಿ ರಾಜರೋಷವಾಗಿ ತಿರುಗಾಡುತ್ತಿರುವ ಚಿರತೆ: ಜನತೆ ಕಂಗಾಲು

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಭಾರೀ ಮಳೆಗೆ ತೆಕ್ಕಾರು ಜುಮ್ಮಾ ಮಸೀದಿಯ ಆವರಣದ ತಡೆಗೋಡೆ ಕುಸಿತ

Suddi Udaya

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya

ಮಂಗಳೂರು ಕಥೋಲಿಕ್ ಸಭಾ ವತಿಯಿಂದ ಬೆಳ್ತಂಗಡಿ ಪತ್ರಕರ್ತ ಹೆರಾಲ್ಡ್ ಪಿಂಟೊ ರಿಗೆ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!