25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ಕಡಿದು ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು ದಾಖಲಿಸಲ್ಪಟ್ಟಿದೆ. ಇದೀಗ ಮತ್ತೊಮ್ಮೆ ಇದೇ ಪರಿಸರದಲ್ಲಿ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹೋಗುವ ದಾರಿಯಲ್ಲೇ ವಿದ್ಯುತ್ ತಂತಿಯೊಂದು ಕಡಿದು ಬಿದ್ದು ಕುತ್ತಿಗೆ ನೇರಕ್ಕೆ ನೇತಾಡುತ್ತಿದ್ದು, ಪ್ರಾಣಕ್ಕೆ ಕಂಟಕವಾಗಿದೆ.

ಅದೃಷ್ಟವಶಾತ್ ಜು.18 ರಂದು ಶಾಲಾ-ಕಾಲೇಜುಗಳಿಗೆ ರಜೆ ಇದ್ದುದರಿಂದ ಆಗುವ ದೊಡ್ಡ ಅನಾಹುತ ತಪ್ಪಿದೆ. ಇದೇ ಮನೆಯಲ್ಲಿ ಈ ಹಿಂದೆ 3-4 ವರ್ಷಗಳಿಂದ ಕಾಲೇಜಿನ ಹಾಗೂ ಪ್ರೌಢಶಾಲೆಯ ಕ್ರೀಡಾಪಟು ವಿದ್ಯಾರ್ಥಿಗಳು ನೆಲೆಸಿದ್ದರು. ಇಂತಹ ಸಮಸ್ಯೆ ಇರುವುದರಿಂದಲೇ ಈ ವರ್ಷ ಇಲ್ಲಿ ಮಾಲೀಕರು ವಾಸಕ್ಕೆ ಅವಕಾಶ ನೀಡಲಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪ್ರಾಣ ಹಾನಿ ಆಗುವ ಮೊದಲು ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.

Related posts

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಭಜನಾ ಕಾರ್ಯಕ್ರಮ

Suddi Udaya

ಭಗವಾನ್ ಶ್ರೀ ಮಹಾವೀರ ಸ್ವಾಮಿಯ ಜನ್ಮಕಲ್ಯಾಣೋತ್ಸವ ಕಾರ್ಯಕ್ರಮ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya

ಪಾರೆಂಕಿ ಶ್ರೀ ರಾಮನಗರ ಹಾರಬೆಯಲ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya

ವೇಣೂರು: ಓಮ್ನಿ ಕಾರು ವಿದ್ಯುತ್ ಕ೦ಬಕ್ಕೆ ಡಿಕ್ಕಿ: ಪ್ರಾಣಾಪಾಯದಿಂದ ಪಾರು

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!