September 6, 2026
Uncategorized

ಸುದ್ದಿ ಉದಯ ಫಲಶ್ರುತಿ: ಬಂದಾರು ಬೋಲೋಡಿ ಎಂಬಲ್ಲಿ ಗುಡ್ಡ ಕುಸಿತ ವರದಿ ಬೆನ್ನಲ್ಲೇ ಗ್ರಾ.ಪಂ. ನಿಂದ ತಕ್ಷಣ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ

ಬಂದಾರು : ಬಂದಾರು ಗ್ರಾಮದ ಮೈರೋಳ್ತಡ್ಕ, ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದಲ್ಲಿ ರಾತ್ರಿ ಸುರಿದ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು.

ಈ ಬಗ್ಗೆ ಸುದ್ದಿ ಉದಯ ಆನ್ ಲೈನ್ ವರದಿ ಪ್ರಕಟಿಸಿದ ಕೂಡಲೇ ಸ್ಪಂದಿಸಿದ ಗ್ರಾ.ಪಂ. ನವರು ಜೆಸಿಬಿ ಮುಖಾಂತರ ಮಣ್ಣು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಗೌಡ ಖಂಡಿಗ ರವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಮುಗ್ರೋಡಿ ಕನ್ ಸ್ಟ್ರಕ್ಷನ್ ನವರಿಗೆ ತಿಳಿಸಿದಾಗ ಮಣ್ಣು ತೆರವು ಕಾರ್ಯಕ್ಕೆ ಸ್ಥಳಕ್ಕೆ ಎರಡೂ ಜೆಸಿಬಿ ಕಳುಹಿಸಿ ಮಣ್ಣು ತೆರವು ನಡೆಸಿದರು. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಪಂಚಾಯತ್ ಸದಸ್ಯೆ ಸುಚಿತ್ರ ಮುರ್ತಾಜೆ ಆಗಮಿಸಿ ಪರಿಶೀಲನೆ ನಡೆಸಿದರು.

Related posts

ಮೃತ ಅಕಾಂಕ್ಷ ಮೃತದೇಹ ಮನೆಗೆ ಆಗಮನ : ಶಾಸಕ ಹರೀಶ್ ಪೂಂಜ ಭೇಟಿ, ಸಾಂತ್ವನ

Suddi Udaya

ಬಂದಾರು : ‘ಅಕ್ಷರ ಸಿರಿ’ ಪ್ರಶಸ್ತಿ ಪುರಸ್ಕೃತ ದೈ.ಶಿ.ಶಿಕ್ಷಕ ಪ್ರಶಾಂತ್ ಸುವರ್ಣ ಅವರಿಗೆ ಭಾವನಾತ್ಮಕ ಬೀಳ್ಕೊಡುಗೆ ಸಮಾರಂಭ – ಪ್ರತಿಭಾ ಪುರಸ್ಕಾರ

Suddi Udaya

ಶ್ರೀ ಗುರುದೇವಾ ದತ್ತಾಂಜನೆಯ ಭಜನೆ ಸಮಿತಿಯಿಂದ ಸಮಾಜ ಮುಖಿ ಕಾರ್ಯ: ಕರಂಬಾರು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಹಸ್ತಾಂತರ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya

ಬೆಳ್ತಂಗಡಿ ಹಿಂದೂ ರುದ್ರಭೂಮಿ ಅಭಿವೃದ್ಧಿಗೆ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ಯೋಜನೆಯಿಂದ ನೆರವು

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!