April 2, 2025
ತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

ಶಿಶಿಲ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಅಂಗಳಕ್ಕೆ ಬಂದು ದೇವಸ್ಥಾನದ ಒಳಗೆ ನುಗ್ಗಿದೆ.ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದೇವಸ್ಥಾನ ಪರಿಸರದಲ್ಲಿ ಆನೇಕ ಮನೆಗಳಿದ್ದು, ದೇವಸ್ಥಾನದ ಅಂಗಳ ತನಕ ನೀರು ಬಂದಿರುವುದರಿಂದ ಈ ಮನೆಯವರು ಭಯಭೀತರಾಗಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿಅಣೆಕಟ್ಟಿನಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿಂದ ಎನ್ನುತ್ತಾರೆ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಬಿ. ಅವರು. ಶಿಶಿಲ ಪೇಟೆಗೆ

ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ತಮ್ಮ ಮನೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಹಾಗೂ ಲಿಫ್ಟ್ ಉದ್ಘಾಟನೆ

Suddi Udaya
error: Content is protected !!