25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

ಶಿಶಿಲ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಅಂಗಳಕ್ಕೆ ಬಂದು ದೇವಸ್ಥಾನದ ಒಳಗೆ ನುಗ್ಗಿದೆ.ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದೇವಸ್ಥಾನ ಪರಿಸರದಲ್ಲಿ ಆನೇಕ ಮನೆಗಳಿದ್ದು, ದೇವಸ್ಥಾನದ ಅಂಗಳ ತನಕ ನೀರು ಬಂದಿರುವುದರಿಂದ ಈ ಮನೆಯವರು ಭಯಭೀತರಾಗಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿಅಣೆಕಟ್ಟಿನಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿಂದ ಎನ್ನುತ್ತಾರೆ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಬಿ. ಅವರು. ಶಿಶಿಲ ಪೇಟೆಗೆ

ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ತಮ್ಮ ಮನೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

Suddi Udaya

ಕಾಜೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ಕಾರ್ಯಾಗಾರ

Suddi Udaya
error: Content is protected !!