25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

ಶಿಶಿಲ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಅಂಗಳಕ್ಕೆ ಬಂದು ದೇವಸ್ಥಾನದ ಒಳಗೆ ನುಗ್ಗಿದೆ.ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದೇವಸ್ಥಾನ ಪರಿಸರದಲ್ಲಿ ಆನೇಕ ಮನೆಗಳಿದ್ದು, ದೇವಸ್ಥಾನದ ಅಂಗಳ ತನಕ ನೀರು ಬಂದಿರುವುದರಿಂದ ಈ ಮನೆಯವರು ಭಯಭೀತರಾಗಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿಅಣೆಕಟ್ಟಿನಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿಂದ ಎನ್ನುತ್ತಾರೆ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಬಿ. ಅವರು. ಶಿಶಿಲ ಪೇಟೆಗೆ

ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ತಮ್ಮ ಮನೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ನ.7 ರಂದು ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯಲಿರುವ ಬೆಳ್ತಂಗಡಿ ಪಟ್ಟಣ ಪಂಚಾಯತ್‌ ಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡದಂತೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆ

Suddi Udaya

ಉಜಿರೆ ಎಸ್. ಡಿ .ಎಮ್ ಪದವಿ ಕಾಲೇಜಿನಲ್ಲಿ ಪ್ರವೇಶ ಪ್ರಕ್ರಿಯೆ ಆರಂಭ

Suddi Udaya

ಸೆ.10: ನಾಲ್ಕೂರು ಯುವಶಕ್ತಿ ಫ್ರೆಂಡ್ಸ್ ನಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಧಾರ್ಮಿಕ ಕಾರ್ಯಕ್ರಮ, ಮುದ್ದು ಕೃಷ್ಣ ಸ್ಪರ್ಧೆ, ವಿವಿಧ ಆಟೋಟ ಸ್ಪರ್ದೆಗಳು

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಉಜಿರೆ ಕಾಶಿಬೆಟ್ಟು ಬಳಿ ಬೈಕ್ ಹಾಗೂ ಕಾರು ನಡುವೆ ಅಪಘಾತ: ಬೈಕ್ ಸವಾರರಿಗೆ ಗಂಭೀರ ಗಾಯ

Suddi Udaya
error: Content is protected !!