22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

ಶಿಶಿಲ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಅಂಗಳಕ್ಕೆ ಬಂದು ದೇವಸ್ಥಾನದ ಒಳಗೆ ನುಗ್ಗಿದೆ.ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದೇವಸ್ಥಾನ ಪರಿಸರದಲ್ಲಿ ಆನೇಕ ಮನೆಗಳಿದ್ದು, ದೇವಸ್ಥಾನದ ಅಂಗಳ ತನಕ ನೀರು ಬಂದಿರುವುದರಿಂದ ಈ ಮನೆಯವರು ಭಯಭೀತರಾಗಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿಅಣೆಕಟ್ಟಿನಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿಂದ ಎನ್ನುತ್ತಾರೆ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಬಿ. ಅವರು. ಶಿಶಿಲ ಪೇಟೆಗೆ

ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ತಮ್ಮ ಮನೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ರಚನೆ

Suddi Udaya

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

Suddi Udaya

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕಲಾ ಸಿಂಚನ- 2025 ಜಾನಪದ ನೃತ್ಯ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ.

Suddi Udaya

ಬಜರಂಗದಳ ಕಾರ್ಯಕರ್ತರ ಮೇಲೆ ಗಡಿಪಾರು ವರದಿಯನ್ನು ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ಭಜರಂಗದಳ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ : ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ರಿಗೆ ಮನವಿ

Suddi Udaya

ಬೆಳ್ತಂಗಡಿ : ಹಳೆಕೋಟೆಯಲ್ಲಿ ಗೋಲ್ಡನ್ ಬ್ಯೂಟಿ ಪಾರ್ಲರ್ & ಮೇಕಪ್ ಅಕಾಡೆಮಿ (ಫ್ಯಾನ್ಸಿ ಮತ್ತು ಟೈಲರಿಂಗ್) ಶುಭಾರಂಭ

Suddi Udaya
error: Content is protected !!