ಸಚಿವ ವಿ.ಸೋಮಣ್ಣರವನ್ನು ಭೇಟಿಯಾದ ಜಿ.ಪಂ. ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ: ಮಂಗಳೂರು ನಿಂದ ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ

Suddi Udaya

ಬಂಟ್ವಾಳ: ಬಂಟ್ವಾಳ ತಾಲ್ಲೂಕಿನ ಸರಪಾಡಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ನೇತೃತ್ವದ ನಿಯೋಗ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಜು.17 ರಂದು ಭೇಟಿಯಾಗಿ ಕಣ್ಣೂರು ಮಂಗಳೂರು ಬೆಂಗಳೂರು ರೈಲಿಗೆ ಬದಲಾಗಿ ಮಂಗಳೂರು ಬೆಂಗಳೂರು ನೇರ ರೈಲು ಒದಗಿಸುವಂತೆ ಮನವಿ ಸಲ್ಲಿಸಿದರು.

ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ ಕಾಮತ್, ಮಾಜಿ ಶಾಸಕ ಸಂಜೀವ ಮಠಂದೂರು ಮತ್ತಿತರರು ಉಪಸ್ಥಿತರಿದ್ದರು.

Leave a Comment

error: Content is protected !!