25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

ನಡ :ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆಗೊಂಡಿದೆ. “ಗಣಿತ ಪ್ರಯೋಗಶಾಲೆ” “ಹಿಂದಿ ಸ್ಮಾರ್ಟ್ ಕ್ಲಾಸ್” “ವನಸಿರಿ ಔಷಧೀಯ ಸಸ್ಯ ವನ” “ATL ಟಿಂಕರಿಂಗ್ ವಿಜ್ಞಾನ ಲ್ಯಾಬ್” ಸಂಪೂರ್ಣ ಶಾಲೆಗೆ ಸೋಲಾರ್ ವ್ಯವಸ್ಥೆ, ಸುಸಜ್ಜಿತ ಗ್ರಂಥಾಲಯ , “ಸಮಾಜ ವಿಜ್ಞಾನ ಕ್ರಿಯೇಟಿವ್ ಕ್ಲಾಸ್” ಶಾಲೆಯ‌ ಸುತ್ತ-ಮುತ್ತ ಹಚ್ಚ ಹಸುರಾದ ಲಾನ್ ಅಳವಡಿಕೆ, Pot ನಲ್ಲಿ ಮತ್ತು ತೂಗು ಬುಟ್ಟಿಗಳಲ್ಲಿ ಬೆಳೆಸಲಾಗಿರುವ ನೂರಾರು ಬಗೆಯ ಅಲಂಕಾರಿಕ ಗಿಡಗಳು, ಎರಡು ಎಕರೆಯಲ್ಲಿ ಬೆಳೆಸಲಾಗುತ್ತಿರುವ ಅಡಿಕೆ ತೋಟ, ಅಕ್ಷರ ಕೈತೋಟ, ತರಕಾರಿ ತೋಟ , ಶಾಲೆಯ ಸರ್ವಾಂಗೀಣ ಅಭಿವೃದ್ಧಿಯ ಆಕರ್ಷಣೆಯಾಗಿದೆ. ಮುಖ್ಯ ಶಿಕ್ಷಕರ ಮತ್ತು ಎಲ್ಲಾ ಶಿಕ್ಷಕರ ಶ್ರಮದ ಪ್ರತಿಫಲ 2024ನೇ ಸಾಲಿನ ಶ್ರೀ ಸತ್ಯ ಸಾಯಿ ಸೇವಾ ಟ್ರಸ್ಟ್ ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ ವತಿಯಿಂದ ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024 ಪ್ರಶಸ್ತಿಗೆ ಆಯ್ಕೆಗೊಂಡಿದ್ದು ಇದೇ ತಿಂಗಳ 27 ನೇ ತಾರೀಖು ರೂ 10,000 ನಗದು ಬಹುಮಾನ ಮತ್ತು ಪ್ರಶಸ್ತಿಯನ್ನು ಸ್ವೀಕರಿಸಲಿದೆ.

Related posts

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಬಳಂಜ : ಬೋಂಟ್ರೊಟ್ಟುಗುತ್ತು ದೈವಸ್ಥಾನದಲ್ಲಿ ಮಹಾ ಚಂಡಿಕಾಯಾಗ: ವಿಧಾನಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಸಹಿತ ನೂರಾರು ಭಕ್ತರು ಭಾಗಿ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya
error: Content is protected !!