23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ಚಾರ್ಮಾಡಿ ಗ್ರಾಮದ ತೋಟತ್ತಾಡಿಯ ಮುಖ್ಯ ರಸ್ತೆಯ ಸೇತುವೆಯ ಅಪಾಯದ ಹಂಚಿನಲ್ಲಿದ್ದು ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಳೆದ 70 ವರ್ಷಗಳಲ್ಲಿ ಇರುವಂತಹ ಸೇತುವೆಯು ಮಳೆಗೆ ಹಾನಿಯಾಗಿದ್ದು ಪಂಚಾಯತಿ ಸದಸ್ಯರು ಹಾಗೂ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರು ದುರಸ್ತಿಪಡಿಸುವ ಯಾವುದೇ ಕೆಲಸಗಳನ್ನು ಮಾಡದೆ ಕೇವಲ ಪೊಳ್ಳು ಭರವಸೆಯನ್ನು ನೀಡಿದ್ದಾರೆ.

ಇದೀಗ ಈ ಸೇತುವೆ ಅಪಾಯದಲ್ಲಿದ್ದು ಶಾಲೆ, ಕಾಲೇಜು ಹಾಗೂ ದೈನಂದಿನ ಕೆಲಸಕ್ಕೆ ಹೋಗುವಂತಹ ಜನರು ಈ ಸೇತುವೆ ಮೇಲೆ ಹೋಗುವಾಗ ಜೀವ ಭಯದಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆದ್ದರಿಂದ ಅನಾಹುತ ಆಗುವ ಮೊದಲೇ ಇದಕ್ಕೆ ಸಂಬಂಧಪಟ್ಟ ಪಂಚಾಯಿತಿ ಸದಸ್ಯರು ಹಾಗೂ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಶಾಶ್ವತವಾದ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಜೇಮ್ಸ್ ಪಟ್ಟೇರಿಲ್ ಪಟ್ಟಾಭಿಷೇಕ

Suddi Udaya

ಸುವರ್ಣ ಸಾಂಸ್ಕೃತಿಕ ವೈಭವ: ಜೋಡು ಜೀಟಿಗೆ ನಾಟಕ ಸಾವಿರಾರು ಜನರಿಂದ ವೀಕ್ಷಣೆ : ಸಾಂಸ್ಕೃತಿಕ ರಾಯಭಾರಿ ಸಂಪತ್ ಬಿ ಸುವರ್ಣರವರಿಗೆ ವ್ಯಾಪಕ ಮೆಚ್ಚುಗೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಶಾಸಕ ಹರೀಶ್ ಪೂಂಜರನ್ನು ಬಂಧಿಸದಂತೆ ಹಾಗೂ ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕೀತು ಮಾಡಿದ ಕರ್ನಾಟಕ ಹೈಕೋರ್ಟ್

Suddi Udaya

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya
error: Content is protected !!