22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಾಯದಂಚಿನಲ್ಲಿರುವ ತೋಟತ್ತಾಡಿಯ ಸೇತುವೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಆಗ್ರಹ

ಚಾರ್ಮಾಡಿ ಗ್ರಾಮದ ತೋಟತ್ತಾಡಿಯ ಮುಖ್ಯ ರಸ್ತೆಯ ಸೇತುವೆಯ ಅಪಾಯದ ಹಂಚಿನಲ್ಲಿದ್ದು ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಳೆದ 70 ವರ್ಷಗಳಲ್ಲಿ ಇರುವಂತಹ ಸೇತುವೆಯು ಮಳೆಗೆ ಹಾನಿಯಾಗಿದ್ದು ಪಂಚಾಯತಿ ಸದಸ್ಯರು ಹಾಗೂ ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರು ದುರಸ್ತಿಪಡಿಸುವ ಯಾವುದೇ ಕೆಲಸಗಳನ್ನು ಮಾಡದೆ ಕೇವಲ ಪೊಳ್ಳು ಭರವಸೆಯನ್ನು ನೀಡಿದ್ದಾರೆ.

ಇದೀಗ ಈ ಸೇತುವೆ ಅಪಾಯದಲ್ಲಿದ್ದು ಶಾಲೆ, ಕಾಲೇಜು ಹಾಗೂ ದೈನಂದಿನ ಕೆಲಸಕ್ಕೆ ಹೋಗುವಂತಹ ಜನರು ಈ ಸೇತುವೆ ಮೇಲೆ ಹೋಗುವಾಗ ಜೀವ ಭಯದಲ್ಲಿ ಜೀವವನ್ನು ಕೈಯಲ್ಲಿ ಹಿಡಿದು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಆದ್ದರಿಂದ ಅನಾಹುತ ಆಗುವ ಮೊದಲೇ ಇದಕ್ಕೆ ಸಂಬಂಧಪಟ್ಟ ಪಂಚಾಯಿತಿ ಸದಸ್ಯರು ಹಾಗೂ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಹಾಗೂ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೊಂದು ಶಾಶ್ವತವಾದ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಕನ್ಯಾಡಿ ಸ.ಉ. ಹಿ. ಪ್ರಾ ಶಾಲೆಯಲ್ಲಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಹಳೆ ವಿದ್ಯಾರ್ಥಿಗಳಿಂದ ಸ್ವಚ್ಛತಾ ಶ್ರಮದಾನ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಕಲಾಭಿನಂದನೆ – 2026 ಸಂಭ್ರಮಾಚರಣೆ

Suddi Udaya

ವಿಧಾನ ಪರಿಷತ್ ಚುನಾವಣೆ : ಮದುಮಗನಿಂದ ಕೊಕ್ಕಡ ಪಂಚಾಯತ್ ನಲ್ಲಿ ಮತ ಚಲಾವಣೆ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

Suddi Udaya
error: Content is protected !!