23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಉಜಿರೆ ಬಿಸಿಎಂ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯು ಉಜಿರೆಯ ಕರ್ನಾಟಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (BCM) ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳಿಗೆ ನಾಯಕತ್ವ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿತು.

ಜೆಸಿಐ ಭಾರತದ ಅಮೃತ ಮಹೋತ್ಸವದ ಪ್ರಯುಕ್ತ ನಡೆಯುತ್ತಿರುವ ಸರಣಿ ತರಬೇತಿ ಕಾರ್ಯಕ್ರಮವನ್ನು, ಗ್ರಾಮ ಪಂಚಾಯತ್ ಉಜಿರೆಯ ಉಪಾಧ್ಯಕ್ಷ ರವಿ ಪೂಜಾರಿ ಬರಮೇಲು ಕಾರ್ಯಕ್ರಮವನ್ನು ಉದ್ಘಾಟಿಸಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಕಾರ್ಯಕ್ರಮಗಳಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ವಲಯ ತರಬೇತುದರರು, ಘಟಕದ ಉಪಾಧ್ಯಕ್ಷರಾದ ಹೇಮಾವತಿ ಕೆ ಇವರು ತರಬೇತಿಯನ್ನು ಅತ್ಯುತಮವಾಗಿ ನಡೆಸಿಕೊಟ್ಟರು. 40 ವಿದ್ಯಾರ್ಥಿನಿಯರು ತರಬೇತಿಯಲ್ಲಿ ಭಾಗವಹಿಸಿದರು .

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ರಂಜಿತ್ ಎಚ್ ಡಿ ವಹಿಸಿ, ಜೀವನದಲ್ಲಿ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ತರಬೇತಿಯ ಮಹತ್ವ ವನ್ನು ವಿವರಿಸಿ ಎಲ್ಲರನ್ನು ಸ್ವಾಗತಿಸಿದರು.

ವಿದ್ಯಾರ್ಥಿ ನಿಲಯದ ಮೇಲ್ವಿಚಾರಕರಾದ ಚಂದ್ರಪ್ಪ ಡಿ ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ತರಬೇತಿಯನ್ನು ಆಯೋಜನೆ ಮಾಡಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕಕ್ಕೆ ಧನ್ಯವಾದ ಸಲ್ಲಿಸಿದರು.

ವೇದಿಕೆ ಆಹ್ವಾನವನ್ನು ಜೊತೆ ಕಾರ್ಯದರ್ಶಿಗಳಾದ ಪ್ರಮೋದ್ ಕೆ, ಜೆಸಿ ವಾಣಿಯನ್ನು ಜೆಜೆಸಿ ಅಧ್ಯಕ್ಷರಾದ ಸಮನ್ವೀತ್ ಕುಮಾರ್ ವಾಚಿಸಿದರು.

ಕಾರ್ಯಕ್ರಮದಲ್ಲಿ ಪೂರ್ವಧ್ಯಕ್ಷರಾದ ಪ್ರಸಾದ್ ಬಿ ಎಸ್ ಭಾಗವಹಿಸಿದರು. ಕಾರ್ಯದರ್ಶಿಗಳಾದ ಅನದೀಪ್ ಜೈನ್ ಇವರ ಧನ್ಯವಾದದೊಂದಿಗೆ ತರಬೇತಿ ಕಾರ್ಯಕ್ರಮ ಮುಕ್ತಯವಾಯಿತು.

Related posts

ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆಯವರಿಂದ ಹತ್ಯಡ್ಕದಲ್ಲಿ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಶ್ರೀರಾಮ ಶಾಲೆ ಸುಲ್ಕೇರಿಯ ವಿದ್ಯಾರ್ಥಿನಿ ಕು.ನಿಷ್ಕಾ ಜೈನ್ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ರವರ ಹುಟ್ಟುಹಬ್ಬದ ಪ್ರಯುಕ್ತ ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಘದ ವತಿಯಿಂದ ಅಭಿನಂದನೆ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya
error: Content is protected !!