September 6, 2026
Uncategorized

ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದ ಗುಡ್ಡ ಕುಸಿತ ರಸ್ತೆ ಸಂಚಾರ ಬಂದ್

ಬಂದಾರು : ಜು 18 ಬಂದಾರು ಗ್ರಾಮದ ಮೈರೋಳ್ತಡ್ಕ,ಶಿವನಗರ – ಪೆರ್ಲಬೈಪಾಡಿ ಸಂಪರ್ಕಿಸುವ ಮುಖ್ಯ ರಸ್ತೆಯ ಬೋಲೋಡಿ ಎಂಬಲ್ಲಿನ ಸೇತುವೆ ಪಕ್ಕದಲ್ಲಿ ರಾತ್ರಿ ಸುರಿದ ವಿಪರೀತ ಮಳೆಯ ಪರಿಣಾಮ ಗುಡ್ಡ ಕುಸಿದು ಈ ರಸ್ತೆಯ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ ಸ್ಥಳಕ್ಕೆ
ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ರವರು ಸ್ಥಳಕ್ಕೆ ಭೇಟಿ ನೀಡಿ ತಕ್ಷಣ ಮುಗ್ರೋಡಿ ಕನ್ ಸ್ಟ್ರಕ್ಷನ್ ನವರಿಗೆ ತಿಳಿಸಿದಾಗ ಮಣ್ಣು ತೆರವು ಕಾರ್ಯಕ್ಕೆ ಸ್ಥಳಕ್ಕೆ ಜೆಸಿಬಿ, ಟಿಪ್ಪರ್ ಕಳುಹಿಸಿಕೊಡುವುದಾಗಿ ತಿಳಿಸಿರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇದೆ ಸ್ಥಳದಲ್ಲಿ ಇನ್ನಷ್ಟು ಭಾರಿ ಗಾತ್ರ ಗುಡ್ಡ ಕುಸಿಯುವ ಲಕ್ಷಣ ಕಾಣಿಸ್ತಾ ಇದೆ, ಈ ಭಾಗದಲ್ಲಿ ಸಂಚರಿಸುವವರು ಸ್ವಲ್ಪ ಎಚ್ಚರಿಕೆಯಿಂದ ಸಂಚಾರಿಸಬೇಕಾಗಿದೆ ಸoಬoಧಪಟ್ಟ ಇಲಾಖೆಯು ಇದರ ಬಗ್ಗೆ ಸೂಕ್ತ ವ್ಯವಸ್ಥೆ ಮಾಡಬೇಕಾಗಿ ನಾಗರಿಕರ ಒಕ್ಕೊರಲ ಆಗ್ರಹವಾಗಿದೆ,
ಜೂನ್ ತಿಂಗಳಲ್ಲಿ ಇದೆ ಸ್ಥಳದಲ್ಲಿ ಮಣ್ಣು ಕುಸಿತ ಉಂಟಾಗಿರುವ ವರದಿಯಾಗಿತ್ತು.

Related posts

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

Suddi Udaya

ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು-ಬಜಿರೆ – ಎ. 2: ಶ್ರೀ ರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ – ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಚಾವಣಿ ಲೋಕಾರ್ಪಣೆ ಹಾಗೂ ಕೊರಗಜ್ಜ ದೈವದ ನೇಮೋತ್ಸವ

Suddi Udaya

ಇಂದಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಯೋಧ್ಯೆ ಬಾಲರಾಮನ ಮೂರ್ತಿ ಕೆತ್ತನೆ ಕಾರ್ಯ ನಿರ್ವಹಿಸಿರುವ ನಾಳದ ಶಿಲ್ಪಿ ಜಯಚಂದ್ರ ಆಚಾರ್ಯರವರಿಗೆ ಬೆಳ್ತಂಗಡಿ ಗುರು ಸೇವಾ ಪರಿಷತ್ ಘಟಕದಿಂದ ಗೌರವಾರ್ಪಣೆ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬೆಳ್ತಂಗಡಿ ಸರ್ಕಲ್ ಸಮಿತಿ ವಾರ್ಷಿಕ ಮಹಾಸಭೆ, ಸಮಿತಿ ರಚನೆ

Suddi Udaya
error: Content is protected !!