23.3 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬೇರೆ ರಾಜ್ಯದಿಂದ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಲಾಗಿದೆ.

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಬಳಿಯ ಕಟ್ಟಡ ಕೆಲಸಕ್ಕೆ ಕಲ್ಕತ್ತಾ ಮೂಲದ ದಂಪತಿಗಳಾದ ಮುಷರಫ್ ಮತ್ತು ರೀಮಾ(24) ಬಂದಿದ್ದು. ಪತ್ನಿ ರೀಮಾ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಜು.8 ರಂದು ಹೋಗಿದ್ದು ಬಳಿಕ ವಾಪಸ್ ಬರದೆ ಇದ್ದ ಬಗ್ಗೆ ಪತಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜು.8 ರಂದು ನಾಪತ್ತೆ ದೂರು ನೀಡಿದ್ದರು‌.

ಬೆಳ್ತಂಗಡಿ ಪೊಲೀಸ್ ನಾಪತ್ತೆ ಪ್ರಕರಣ ಜಾಡು ಹಿಡಿದು ಟೆಕ್ನಿಕಲ್ ಮಾಹಿತಿ ಆಧಾರದಲ್ಲಿ ಜು.17 ರಂದು ಬಂಟ್ವಾಳದ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತಂದು ಪತಿ ಜೊತೆ ಕಳುಹಿಸಿಕೊಟ್ಟು ಪ್ರಕರಣ ಸುಖಾಂತ್ಯ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ,ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ನೇತೃತ್ವದ ಸಿಬ್ಬಂದಿ ಚರಣ್ ರಾಜ್ , ಬಸವರಾಜ್ , ಬೆನ್ನಿಚ್ಚನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಮಂಗಳೂರು: ಸೋಮೇಶ್ವರ ಪುರಸಭೆ ಚುನಾವಣೆ: ಬೆಳ್ತಂಗಡಿ ಮೂಲದ ಬಳಂಜ ಜಯ ಪೂಜಾರಿ ನಿಟ್ಟಡ್ಕ ರವರಿಗೆ ಭರ್ಜರಿ ಗೆಲುವು

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದಿಂದ ಡಿ.2 ಯಕ್ಷ ಸಂಭ್ರಮ 2023

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜ ವಿಧಿವಶ – ಬಲ್ಮಠ ನಿವಾಸದಲ್ಲಿ ಅಂತಿಮ ದರ್ಶನ – ಬಳಿಕ ಮಾಣಿಂಜದಲ್ಲಿ ಅಂತಿಮ ವಿಧಿ ವಿಧಾನ ಕಾರ್ಯ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ಯಕ್ಷಭಾರತಿ ದಶಮಾನೋತ್ಸವದ ಅಂಗವಾಗಿ ನಡೆಯುವ ಸನ್ಮಾನ ಕಾರ್ಯಕ್ರಮ ಮತ್ತು ದೇವಿ ಮಹಾತ್ಮೆ ಯಕ್ಷಗಾನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!