22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಕಾಮಗಾರಿ ಕೆಲಸಕ್ಕೆ ಬೇರೆ ರಾಜ್ಯದಿಂದ ಬಂದಿದ್ದ ಮಹಿಳೆ ನಾಪತ್ತೆ ಪ್ರಕರಣವನ್ನು ಬೆಳ್ತಂಗಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಪತ್ತೆ ಹಚ್ಚಲಾಗಿದೆ.

ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಬಳಿಯ ಕಟ್ಟಡ ಕೆಲಸಕ್ಕೆ ಕಲ್ಕತ್ತಾ ಮೂಲದ ದಂಪತಿಗಳಾದ ಮುಷರಫ್ ಮತ್ತು ರೀಮಾ(24) ಬಂದಿದ್ದು. ಪತ್ನಿ ರೀಮಾ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಜು.8 ರಂದು ಹೋಗಿದ್ದು ಬಳಿಕ ವಾಪಸ್ ಬರದೆ ಇದ್ದ ಬಗ್ಗೆ ಪತಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜು.8 ರಂದು ನಾಪತ್ತೆ ದೂರು ನೀಡಿದ್ದರು‌.

ಬೆಳ್ತಂಗಡಿ ಪೊಲೀಸ್ ನಾಪತ್ತೆ ಪ್ರಕರಣ ಜಾಡು ಹಿಡಿದು ಟೆಕ್ನಿಕಲ್ ಮಾಹಿತಿ ಆಧಾರದಲ್ಲಿ ಜು.17 ರಂದು ಬಂಟ್ವಾಳದ ಬಸ್ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆತಂದು ಪತಿ ಜೊತೆ ಕಳುಹಿಸಿಕೊಟ್ಟು ಪ್ರಕರಣ ಸುಖಾಂತ್ಯ ಮಾಡಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ್ ಮತ್ತು ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ,ಸಬ್ ಇನ್ಸ್ಪೆಕ್ಟರ್ ಮುರುಳಿಧರ್ ನಾಯ್ಕ್ ನೇತೃತ್ವದ ಸಿಬ್ಬಂದಿ ಚರಣ್ ರಾಜ್ , ಬಸವರಾಜ್ , ಬೆನ್ನಿಚ್ಚನ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ವೇಣೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

Suddi Udaya

ಡಿ.17: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ, ಬಿರುಸಿನ ಪೈಪೋಟಿ: ಬಿಜೆಪಿ-ಕಾಂಗ್ರೆಸ್ ಬಿಗ್ ಫೈಟ್, 12 ಸ್ಥಾನಕ್ಕೆ 24 ನಾಮಪತ್ರ ಸಲ್ಲಿಕೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಆಕ್ಷೇಪಣಾಹ೯ ಪೋಸ್ಟ್ ವಸಂತ ಗಿಳಿಯಾರ್ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಆ.16: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya
error: Content is protected !!