September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ತಂತಿ ಮಾರ್ಗಕ್ಕೆ ಕಡಿದು ಬೀಳುತ್ತಿದೆ. ಈ ಭಾಗದ ಲೈನ್ ಮ್ಯಾನ್ ದೂರು ನೀಡಿದ ತಕ್ಷಣ ಬಂದು ತಾತ್ಕಾಲಿಕವಾಗಿ ಸಮಸ್ಯೆಯನ್ನು ಬಗೆಹರಿಸುತ್ತಾರೆ. ಆದರೆ ಅದೆಷ್ಟು ಬಾರಿ ಇಲಾಖೆಗೆ ಮನವಿ ಮಾಡಿದರೂ ಕೂಡಾ ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸುತ್ತಿಲ್ಲ. ಈ ಹಿಂದೆ ಮೆಸ್ಕಾಂ ಇಲಾಖೆಯ ಅದಾಲತ್ ನಲ್ಲಿ ಕೂಡ ದೂರು ದಾಖಲಿಸಲ್ಪಟ್ಟಿದೆ. ಇದೀಗ ಮತ್ತೊಮ್ಮೆ ಇದೇ ಪರಿಸರದಲ್ಲಿ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳು ಹೋಗುವ ದಾರಿಯಲ್ಲೇ ವಿದ್ಯುತ್ ತಂತಿಯೊಂದು ಕಡಿದು ಬಿದ್ದು ಕುತ್ತಿಗೆ ನೇರಕ್ಕೆ ನೇತಾಡುತ್ತಿದ್ದು, ಪ್ರಾಣಕ್ಕೆ ಕಂಟಕವಾಗಿದೆ.

ಅದೃಷ್ಟವಶಾತ್ ಜು.18 ರಂದು ಶಾಲಾ-ಕಾಲೇಜುಗಳಿಗೆ ರಜೆ ಇದ್ದುದರಿಂದ ಆಗುವ ದೊಡ್ಡ ಅನಾಹುತ ತಪ್ಪಿದೆ. ಇದೇ ಮನೆಯಲ್ಲಿ ಈ ಹಿಂದೆ 3-4 ವರ್ಷಗಳಿಂದ ಕಾಲೇಜಿನ ಹಾಗೂ ಪ್ರೌಢಶಾಲೆಯ ಕ್ರೀಡಾಪಟು ವಿದ್ಯಾರ್ಥಿಗಳು ನೆಲೆಸಿದ್ದರು. ಇಂತಹ ಸಮಸ್ಯೆ ಇರುವುದರಿಂದಲೇ ಈ ವರ್ಷ ಇಲ್ಲಿ ಮಾಲೀಕರು ವಾಸಕ್ಕೆ ಅವಕಾಶ ನೀಡಲಿಲ್ಲ. ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಪ್ರಾಣ ಹಾನಿ ಆಗುವ ಮೊದಲು ಈ ಪರಿಸರದಲ್ಲಿ ಹೊಸ ತಂತಿಯನ್ನು ಅಳವಡಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.

Related posts

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರದ ಸಭೆ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಮತ್ತೆ ಬಂದಿದೆ ಮುಳಿಯ ಜ್ಯುವೆಲ್ಸ್ ಚಿನ್ನೋತ್ಸವ, ನ.10ರಿಂದ 30ರ ವರೆಗೆ: ಪುತ್ತೂರು ಮತ್ತು ಬೆಳ್ತಂಗಡಿಯ ಮುಳಿಯ ಜ್ಯುವೆಲ್ಸ್‌ನಲ್ಲಿ ಮಳಿಗೆಗಳಲ್ಲಿ ಚಿನ್ನದ ಹಬ್ಬ

Suddi Udaya

ಪ್ರಸಾರ ಭಾರತಿ ದೂರದರ್ಶನದಲ್ಲಿ ಇಳಂತಿಲದ ಭರತನಾಟ್ಯ ಕಲಾವಿದೆ ಕೃತಿ ಕೈಲಾರ್‌ಗೆ ಮಾನ್ಯತೆ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಕಕ್ಕಿಂಜೆ ನಿವಾಸಿ ಎ.ಕೆ ಮುಹಮ್ಮದ್ ಹಾಜಿ (ಅಡ್ಡೂರು ಹಾಜಿ ) ನಿಧನ

Suddi Udaya
error: Content is protected !!