September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೇಲಂತಬೆಟ್ಟು ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವದ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ

ಬೆಳ್ತಂಗಡಿ: ಮೇಲಂತಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಪ್ರಯುಕ್ತ ಮಾಡಿರುವ ‘ನಿಶಾನಿ’ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ಜು.14ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ವಹಿಸಿದ್ದರು. ಕಾಂತಾವರ ಸರಕಾರಿ ಪ್ರೌಢ ಶಾಲಾ ನಿವೃತ್ತ ಮುಖ್ಯೋಪಾಧ್ಯಾಯಿನಿ ಹರಿಣಿ ಕಾರ್ಯಕ್ರಮ ಉದ್ಘಾಟಿಸಿದರು.

ಸ್ಮರಣ ಸಂಚಿಕೆಯನ್ನು ವೇಣೂರು ಎಸ್ ಡಿ ಎಂ ಐ ಟಿ ಐ ಕಾಲೇಜು ನಿವೃತ್ತ ಪ್ರಾಂಶುಪಾಲ ಸದಾನಂದ ಬಿಡುಗಡೆಗೊಳಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕ ಹರೀಶ್, ಸಮೂಹ ಸಂಪನ್ಮೂಲ ವ್ಯಕ್ತಿ ರಾಜೇಶ್, ಗ್ರಾಮ ಪಂಚಾಯತ್ ಸದಸ್ಯ ಚಂದ್ರ ರಾಜ್ ಭಾಗವಹಿಸಿದ್ದರು.

ಶಾಲಾ ಶತಮಾನೋತ್ಸವ ಸಮಿತಿಯ ಅಧ್ಯಕ್ಷ ಯೋಗೀಶ್ ಕುಮಾರ್ ನಡಕ್ಕರ, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಚಿನ್ ಕುಮಾರ್ ನೂಜೋಡಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಪ್ರವೀಣ್, ಶಾಲಾ ಮುಖ್ಯೋಪಾಧ್ಯಾಯಿನಿ ರೂಪ, ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿ ಹರ್ಷ ಹೆಚ್.ಆರ್., ಸಮಿತಿಯ ಪದಾಧಿಕಾರಿಗಳು, ಊರವರು ಹಾಜರಿದ್ದರು.

Related posts

ಚಾರ್ಮಾಡಿ: ಬಿ.ಎಸ್.ಎನ್.ಎಲ್ ನಿವೃತ್ತ ಉದ್ಯೋಗಿ ವಿಠ್ಠಲ ಕುಲಾಲ್ ನಿಧನ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಶಿಶಿಲ ಆರೋಗ್ಯ ಉಪಕೇಂದ್ರದ ಆವರಣದಲ್ಲಿ ಶಿಶಿಲ-ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂಸೇವಕರಿಂದ ಸ್ವಚ್ಚತಾ ಕಾರ್ಯ

Suddi Udaya

ನಾವೂರು : ಪೌಷ್ಟಿಕ ಆಹಾರ ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಬೆಳ್ತಂಗಡಿ: ‘ಶೌರ್ಯ’ ಶ್ರೀ ಧರ್ಮಸ್ಥಳ ತುರ್ತು ಸ್ಪಂದನಾ ತಂಡದ ಸಭೆ

Suddi Udaya
error: Content is protected !!