ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

ನೆಲ್ಯಾಡಿ: ಸಕಲೇಶಪುರ ತಾಲೂಕಿನ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ದೊಡ್ಡತಪ್ಪಲು ಎಂಬಲ್ಲಿ ಭೂ ಕುಸಿತ ಉಂಟಾಗಿ ಓಮಿನಿಯೊಂದು ಜಖಂಗೊಂಡಿದ್ದು, ಅದೃಷ್ಟವಶಾತ್‌ ಕಾರು ಚಾಲಕ ಅಪಾಯದಿಂದ ಪಾರಾದ ಘಟನೆ ಜು.18ರಂದು ನಸುಕಿನ ಜಾವ 2.30ರ ಸಮಯಕ್ಕೆ ಸಂಭವಿಸಿದೆ.

ಬೇಲೂರು ತಾಲೂಕಿನ ಬಿಕ್ಕೊಡು ಮೂಲದ ಶರತ್ ಎಂಬವರು ಮಂಗಳೂರು ಕಡೆಯಿಂದ ಸಕಲೇಶಪುರ ಮಾರ್ಗವಾಗಿ ಬರುವ ಸಂದರ್ಭ ದೊಡ್ಡತಪ್ಪಲು ಸಮೀಪ ಭೂ ಕುಸಿತ ಉಂಟಾಗಿ ಕಾರಿನ ಮೇಲೆ ಬಿದ್ದಿದ್ದು ಕಾರು ಮಣ್ಣಿನ ರಾಶಿಯಲ್ಲಿ ಸಿಲುಕಿ ಸಂಪೂರ್ಣವಾಗಿ ಕುಸಿದಿದೆ.

ಈ ಸಂದರ್ಭದಲ್ಲಿ ಹೆದ್ದಾರಿ ಕಾಮಗಾರಿ ಗುತ್ತಿಗೆದಾರ ಕಂಪನಿಯ ಬಿಹಾರ ಮೂಲದ ಕಾರ್ಮಿಕರು ಅಖಿಲೇಶ್, ಶರತ್ ಅವರನ್ನು ವಾಹನದಿಂದ ಹೊರಗೆ ಕರೆತಂದು ಅವರ ಪ್ರಾಣ ಉಳಿಸಿದ್ದಾರೆ.

ಅಖಿಲೇಶ್ ಪಟ್ಟಣದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶರತ್ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು, ಹೆದ್ದಾರಿ ಕಾಮಗಾರಿಯವರು ಮಣ್ಣು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದು, ಮಣ್ಣಿನ ಕುಸಿತ ನಡೆಯುತ್ತಲೇ ಇದೆ. ಸದ್ಯದ ಮಟ್ಟಿಗೆ ಏಕಮುಖ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.

Related posts

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಅಮೆರಿಕದಲ್ಲಿ ಕಾಲಭೈರವೇಶ್ವರ ದೇಗುಲ ನಿರ್ಮಾಣ: ಕಾಮಗಾರಿ ಪರಿಶೀಲಿಸಿದ ಮಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ-2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌|| ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮಂಗಗಳ ಹಾವಳಿಯಿಂದ ತತ್ತರಿಸಿದ ನಿಡ್ಲೆ ಗ್ರಾಮಸ್ಥರು: ನಿಡ್ಲೆ ಜನಸ್ಪಂದನ ಸಭೆಯಲ್ಲಿ ಅರಣ್ಯ ಇಲಾಖೆ ವಿರುದ್ಧ ಜನರ ಆಕ್ರೋಶ

Suddi Udaya
error: Content is protected !!