22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

ಶಿಶಿಲ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಅಂಗಳಕ್ಕೆ ಬಂದು ದೇವಸ್ಥಾನದ ಒಳಗೆ ನುಗ್ಗಿದೆ.ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದೇವಸ್ಥಾನ ಪರಿಸರದಲ್ಲಿ ಆನೇಕ ಮನೆಗಳಿದ್ದು, ದೇವಸ್ಥಾನದ ಅಂಗಳ ತನಕ ನೀರು ಬಂದಿರುವುದರಿಂದ ಈ ಮನೆಯವರು ಭಯಭೀತರಾಗಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿಅಣೆಕಟ್ಟಿನಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿಂದ ಎನ್ನುತ್ತಾರೆ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಬಿ. ಅವರು. ಶಿಶಿಲ ಪೇಟೆಗೆ

ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ತಮ್ಮ ಮನೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಡಿ.ಕೆ.ಆರ್‌.ಡಿ.ಎಸ್ ಮಹಿಳಾ ಸ್ವಸಹಾಯ ಸಂಘಗಳ ರಜತ ಮಹೋತ್ಸವ ಹಾಗೂ ವಿಶ್ವ ಮಹಿಳಾ ದಿನಾಚರಣೆ

Suddi Udaya

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ ಎಸ್ ಡಿ ಎಂ ಪ. ಪೂ. ಕಾಲೇಜು : ಎನ್ಎಸ್ಎಸ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
error: Content is protected !!