September 6, 2026
ತಾಲೂಕು ಸುದ್ದಿ

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

ಶಿಶಿಲ: ಇತಿಹಾಸ ಪ್ರಸಿದ್ಧ ಮತ್ಯತೀರ್ಥ ಎಂದೇ ಖ್ಯಾತವಾದ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಸಮೀಪ ಹರಿಯುತ್ತಿರುವ ಕಪಿಲ ನದಿಯಲ್ಲಿ ಇಂದು ಸಂಜೆಯಿಂದ ನಿರಂತರವಾಗಿ ಪ್ರವಾಹ ಏರಿಕೆಯಾಗುತ್ತಿದ್ದು, ದೇವಸ್ಥಾನದ ಒಳಗೆ ನೀರು ನುಗ್ಗಿದೆ.

ಕಪಿಲ ನದಿಯಲ್ಲಿ ಇಂದು ಮಧ್ಯಾಹ್ನದ ನಂತರ ನದಿಯಲ್ಲಿ ಪ್ರವಾಹ ಏರಿಕೆಯಾಗುತ್ತಾ ಬಂದಿದ್ದು ಸಂಜೆ ವೇಳೆ ಉಕ್ಕಿ ಹರಿದ ಕಪಿಲ ನದಿಯ ಪ್ರವಾಹ ದೇವಸ್ಥಾನದ ಒಳಗೆ ನುಗ್ಗಿದೆ. ಬೈರಾಪುರ ಘಾಟಿಯಲ್ಲಿ ವಿಪರೀತ ಮಳೆಯಾಗುತ್ತಿರುವುದರಿಂದ ಕಪಿಲ ನದಿಯಲ್ಲಿ ಪ್ರವಾಹ ಉಕ್ಕಿ ಹರಿಯಲಾರಂಭಿಸಿದ್ದು, ಪ್ರವಾಹದ ಜೊತೆ ದೊಡ್ಡ, ದೊಡ್ಡ ಗಾತ್ರದ ಮರಗಳು ಬರುತ್ತಿದ್ದು, ಶಿಶಿಲದ ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಇದರಿಂದಾಗಿ ಪ್ರವಾಹ ಹರಿಯಲು ಅಡ್ಡಿಯಾಗಿ ನೀರು ಏರುತ್ತಿದೆ. ಈ ವರ್ಷ ಪ್ರಥಮ ಬಾರಿಗೆ ನೀರು ದೇವಸ್ಥಾನದ ಅಂಗಳಕ್ಕೆ ಬಂದು ದೇವಸ್ಥಾನದ ಒಳಗೆ ನುಗ್ಗಿದೆ.ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ದೇವಸ್ಥಾನ ಪರಿಸರದಲ್ಲಿ ಆನೇಕ ಮನೆಗಳಿದ್ದು, ದೇವಸ್ಥಾನದ ಅಂಗಳ ತನಕ ನೀರು ಬಂದಿರುವುದರಿಂದ ಈ ಮನೆಯವರು ಭಯಭೀತರಾಗಿದ್ದಾರೆ. ಪ್ರವಾಹದಲ್ಲಿ ಇನ್ನಷ್ಟು ಮರಗಳು ಬಂದು ಕಿಂಡಿಅಣೆಕಟ್ಟಿನಲ್ಲಿ ಸಿಲುಕಿಕೊಂಡರೆ ಪ್ರವಾಹ ಮತ್ತಷ್ಟು ಏರುವ ಸಾಧ್ಯತೆಯಿಂದ ಎನ್ನುತ್ತಾರೆ ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಬಿ. ಅವರು. ಶಿಶಿಲ ಪೇಟೆಗೆ

ಬಂದವರು ಇದೀಗ ಕಿಂಡಿಅಣೆಕಟ್ಟು ಮುಳುಗಿರುವುದರಿಂದ ನದಿ ದಾಟಲು ಸಂಕಷ್ಟ ಅನುಭವಿಸುವಂತಾಗಿದೆ. ಕೊಳಕೆ ಬೈಲು ಪ್ರದೇಶದವರು ದೂರದ ದಾರಿ ಮೂಲಕ ತಮ್ಮ ಮನೆಗಳಿಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Related posts

ಹತ್ಯಡ್ಕ ಪ್ರಾ.ಕೃ.ಪ. ಸಹಕಾರ ಸಂಘದ ನೂತನ ಆಡಳಿತ ಮಂಡಳಿಯವರಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಗವದ್ಭಕ್ತರ ಸಭೆ: ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya
error: Content is protected !!