September 6, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

ಉಜಿರೆ: ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22.5 ಲಕ್ಷ ರೂಪಾಯಿ ಮೌಲ್ಯದ ಹೊಸ ಸೀಮೇನ್ಸ್ ಸಿಯೋಸ್ ಫಿಟ್ ಮೊಬೈಲ್ ಸಿ-ಆರ್ಮ್ ಯಂತ್ರವನ್ನು ಜು.17 ರಂದು ಅಳವಡಿಸಿ ಚಾಲನೆ ನೀಡಲಾಯಿತು.


ಸೀಮೇನ್ಸ್ ಸಿಯೋಸ್ ಫಿಟ್ ಮೊಬೈಲ್ ಸಿ-ಆರ್ಮ್ ಯಂತ್ರದ ಬಗ್ಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿ ಸೀಮೇನ್ಸ್ ಸಿಯೋಸ್ ಫಿಟ್ ಮೊಬೈಲ್ ಸಿ-ಆರ್ಮ್ ಯಂತ್ರ ಎಕ್ಸ್-ರೇ ತಂತ್ರಜ್ಞಾನವನ್ನು ಆಧರಿಸಿದ ಸುಧಾರಿತ ವೈದ್ಯಕೀಯ ಚಿತ್ರಣವನ್ನು ಕೊಡಬಲ್ಲ ಸಾಧನವಾಗಿದೆ. ಮಂಗಳೂರಿನ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಈ ಯಂತ್ರ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಬಾರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ.


ಈ ಯಂತ್ರ ಶಕ್ತಿಯುತ ಅತ್ಯಾಧುನಿಕ ಇಮೇಜಿಂಗ್, ನವೀನ ಟಚ್ ಮತ್ತು ಪ್ಲೇ ತಂತ್ರಜ್ಞಾನ ಹೊಂದಿದೆ. ಇದರಲ್ಲಿರುವ ಹೊಸ ತಂತ್ರಜ್ಞಾನದೊಂದಿಗೆ ದೃಶ್ಯಚಿತ್ರಗಳು ಹೆಚ್ಚು ವಿಕಸನಗೊಳ್ಳುತ್ತಿರುವ ದೃಶ್ಯಗಳನ್ನು ಕೊಡಬಲ್ಲ ಸಾಧನವಾಗಿದ್ದು, ಸೂಕ್ತವಾದ ವೈದ್ಯಕೀಯ ಫಲಿತಾಂಶಗಳ ಸಾಧನೆಗೆ ನೆರವಾಗುತ್ತದೆ.


ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 4 ಮಂದಿ ಮುಳೆ ಶಸ್ತ್ರಚಿಕಿತ್ಸಾ ತಜ್ಞರಿದ್ದು, ಇಲ್ಲಿ ಈಗಾಗಲೇ ಹಲವಾರು ಟೋಟಲ್ ನೀ ರಿಪ್ಲೇಸ್‌ಮೆಂಟ್ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಹಾಗೂ ಮೂಳೆ ಮತ್ತು ಕೀಲುಗಳ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಪ್ರಸ್ತುತ ಅಳವಡಿಸಿರುವ ಈ ಯಂತ್ರ ಸೊಂಟ ಮತ್ತು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ, ಗ್ಯಾಸ್ಟ್ರೋ ಕರುಳಿನ ಚಿಕಿತ್ಸೆ, ಎಂಡೋಸ್ಕೋಪಿಕ್, ಮೂತ್ರಶಾಸ್ತ್ರ, ನರಸಂಬಂಧಿ ಖಾಯಿಲೆ, ಹೃದಯದ ಶಸ್ತ್ರಚಿಕಿತ್ಸೆಯಲ್ಲಿ ಈ ಯಂತ್ರ ಅತೀ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಗುರುವಾಯನಕೆರೆ : ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!