September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗಿದ್ದು. ಈಡಿಸ್ ಸೊಳ್ಳೆ ಉತ್ಪತ್ತಿಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಡೆಂಗ್ಯೂ ಜ್ವರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ಡೆಂಗ್ಯೂ ನಿಯಂತ್ರಣ ಮಾಡುವ ಬಗ್ಗೆ ಲಾರ್ವಾ ಉತ್ಪತ್ತಿ ತಾಣಗಳ ನಾಶದ ಬಗ್ಗೆ ಡ್ರೈ ಡೇ ಮುಂಜಾಗ್ರತ ಕ್ರಮವಾಗಿ ಧರ್ಮಸ್ಥಳ ಗ್ರಾಮದ ಜನತಾ ಕಾಲೋನಿಗಳಿಗೆ, ಜನ ಬಿಡದಿ ಪ್ರದೇಶಗಳಲ್ಲಿ, ಮನೆಗಳಿಗೆ ಭೇಟಿ ನೀಡಿ ಕಟ್ಟಡದ ಮೇಲ್ಚಾವಣಿ ಗಿಡದ ಚಟ್ಟಿ, ನಿರುಪಯುಕ್ತ ವಸ್ತುಗಳು, ಟಬ್ಬುಗಳು ಬಕೆಟ್ ಗಳು ಇತ್ಯಾದಿ ಗಳಲ್ಲಿ ನೀರು ಸಂಗ್ರಹವಾಗಿರುವ ಬಗ್ಗೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಯಿತು.

ಡೆಂಗ್ಯೂ ಮಲೇರಿಯಾ ಇದರ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ಬಗ್ಗೆ ಮುನ್ನೆಚ್ಚರಿಕ ಕ್ರಮವಾಗಿ ಪರಿಶೀಲನೆ ನಡೆಸಿ ಜನರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಂಜೀವಿನಿ ಒಕ್ಕೂಟದ ಶ್ರೀಮತಿ ಚಂದ್ರವತಿ, ಶ್ರೀಮತಿ ವೀಣಾ, ಗ್ರಂಥಪಾಲಕರದ ಶ್ರೀಮತಿ ಮಂಜುಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

Suddi Udaya

ನಾವೂರು: ದೈವ ಕ್ಷೇತ್ರ ಬಡೆಕ್ಕಾವು ಗುತ್ತು ಚಾರಿಟೇಬಲ್ ಟ್ರಸ್ಟ್ ನಿಂದ ನೋಟ್ ಪುಸ್ತಕ ವಿತರಣೆ, ಅಪ್ಪೆ ಕಲ್ಲುರ್ಟಿ ದೈವದ ದೊಂದಿ ಕೋಲ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಭಾರೀ ಮಳೆ; ಮದ್ದಡ್ಕ ಹೋಟೆಲ್ ಗೆ ನುಗ್ಗಿದ ಮಳೆ ನೀರು

Suddi Udaya

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya
error: Content is protected !!