July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯ ಸಮೀಪ ಲಾರಿ ಸ್ಕಿಡ್ ಆಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದ ಘಟನೆ ಇಂದು (ಜು.19) ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.

ವಗ್ಗ ಸಮೀಪದ ಮದ್ವ ಎಂಬಲ್ಲಿನ ಶಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಶಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಒಟ್ಟು ಹತ್ತು ಮಂದಿ ಇದ್ದರು ಎನ್ನಲಾಗಿದ್ದು ಸರಿಯಾದ ಮಾಹಿತಿ ಲಭ್ಯವಾಗಿಲ್ಲ.

ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಂಪನ್ನ

Suddi Udaya

ಕಲ್ಮಂಜ: ಉಳ್ಳಾಯ ಉಳ್ಳಾಲ್ತಿ ದೈವಸ್ಥಾನ ಪರಾರಿ ಮಜಲ್ ಗುಂಡ ಇದರ ನೂತನ ದೇಗುಲದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಯುವವಾಹಿನಿ ಘಟಕದಿಂದ ಯುವ ವೈಭವ 2025 ಕ್ಕೆ ಅದ್ದೂರಿ ಚಾಲನೆ : ನಾರಾಯಣ ಗುರು ಚಿಂತನೆಯಿಂದ ಈಡಿಗ ಬಿಲ್ಲವರು ಒಗ್ಗಟ್ಟಾಗೋಣ: ವಿಖ್ಯಾತಾನಂದಶ್ರೀ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya
error: Content is protected !!