September 6, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

ಉಜಿರೆ: ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22.5 ಲಕ್ಷ ರೂಪಾಯಿ ಮೌಲ್ಯದ ಹೊಸ ಸೀಮೇನ್ಸ್ ಸಿಯೋಸ್ ಫಿಟ್ ಮೊಬೈಲ್ ಸಿ-ಆರ್ಮ್ ಯಂತ್ರವನ್ನು ಜು.17 ರಂದು ಅಳವಡಿಸಿ ಚಾಲನೆ ನೀಡಲಾಯಿತು.


ಸೀಮೇನ್ಸ್ ಸಿಯೋಸ್ ಫಿಟ್ ಮೊಬೈಲ್ ಸಿ-ಆರ್ಮ್ ಯಂತ್ರದ ಬಗ್ಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿ ಸೀಮೇನ್ಸ್ ಸಿಯೋಸ್ ಫಿಟ್ ಮೊಬೈಲ್ ಸಿ-ಆರ್ಮ್ ಯಂತ್ರ ಎಕ್ಸ್-ರೇ ತಂತ್ರಜ್ಞಾನವನ್ನು ಆಧರಿಸಿದ ಸುಧಾರಿತ ವೈದ್ಯಕೀಯ ಚಿತ್ರಣವನ್ನು ಕೊಡಬಲ್ಲ ಸಾಧನವಾಗಿದೆ. ಮಂಗಳೂರಿನ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಈ ಯಂತ್ರ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಬಾರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ.


ಈ ಯಂತ್ರ ಶಕ್ತಿಯುತ ಅತ್ಯಾಧುನಿಕ ಇಮೇಜಿಂಗ್, ನವೀನ ಟಚ್ ಮತ್ತು ಪ್ಲೇ ತಂತ್ರಜ್ಞಾನ ಹೊಂದಿದೆ. ಇದರಲ್ಲಿರುವ ಹೊಸ ತಂತ್ರಜ್ಞಾನದೊಂದಿಗೆ ದೃಶ್ಯಚಿತ್ರಗಳು ಹೆಚ್ಚು ವಿಕಸನಗೊಳ್ಳುತ್ತಿರುವ ದೃಶ್ಯಗಳನ್ನು ಕೊಡಬಲ್ಲ ಸಾಧನವಾಗಿದ್ದು, ಸೂಕ್ತವಾದ ವೈದ್ಯಕೀಯ ಫಲಿತಾಂಶಗಳ ಸಾಧನೆಗೆ ನೆರವಾಗುತ್ತದೆ.


ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 4 ಮಂದಿ ಮುಳೆ ಶಸ್ತ್ರಚಿಕಿತ್ಸಾ ತಜ್ಞರಿದ್ದು, ಇಲ್ಲಿ ಈಗಾಗಲೇ ಹಲವಾರು ಟೋಟಲ್ ನೀ ರಿಪ್ಲೇಸ್‌ಮೆಂಟ್ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಹಾಗೂ ಮೂಳೆ ಮತ್ತು ಕೀಲುಗಳ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಪ್ರಸ್ತುತ ಅಳವಡಿಸಿರುವ ಈ ಯಂತ್ರ ಸೊಂಟ ಮತ್ತು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ, ಗ್ಯಾಸ್ಟ್ರೋ ಕರುಳಿನ ಚಿಕಿತ್ಸೆ, ಎಂಡೋಸ್ಕೋಪಿಕ್, ಮೂತ್ರಶಾಸ್ತ್ರ, ನರಸಂಬಂಧಿ ಖಾಯಿಲೆ, ಹೃದಯದ ಶಸ್ತ್ರಚಿಕಿತ್ಸೆಯಲ್ಲಿ ಈ ಯಂತ್ರ ಅತೀ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

Related posts

ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬಳಂಜ: ಜ್ಯೋತಿ ಮಹಿಳಾ ಮಂಡಲದಿಂದ ಸರಕಾರಿ ಶಾಲೆಯಲ್ಲಿ ಊರಿನವರ ಪಾತ್ರ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ಇಳಂತಿಲ ಗ್ರಾ.ಪಂ. ಉಪಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಮೀನಾಕ್ಷಿ ಯವರ ಪರವಾಗಿ ಮನೆ ಮನೆ ಭೇಟಿ ಅಭಿಯಾನ

Suddi Udaya

ನ. 23: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!