April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗಿದ್ದು. ಈಡಿಸ್ ಸೊಳ್ಳೆ ಉತ್ಪತ್ತಿಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಡೆಂಗ್ಯೂ ಜ್ವರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ಡೆಂಗ್ಯೂ ನಿಯಂತ್ರಣ ಮಾಡುವ ಬಗ್ಗೆ ಲಾರ್ವಾ ಉತ್ಪತ್ತಿ ತಾಣಗಳ ನಾಶದ ಬಗ್ಗೆ ಡ್ರೈ ಡೇ ಮುಂಜಾಗ್ರತ ಕ್ರಮವಾಗಿ ಧರ್ಮಸ್ಥಳ ಗ್ರಾಮದ ಜನತಾ ಕಾಲೋನಿಗಳಿಗೆ, ಜನ ಬಿಡದಿ ಪ್ರದೇಶಗಳಲ್ಲಿ, ಮನೆಗಳಿಗೆ ಭೇಟಿ ನೀಡಿ ಕಟ್ಟಡದ ಮೇಲ್ಚಾವಣಿ ಗಿಡದ ಚಟ್ಟಿ, ನಿರುಪಯುಕ್ತ ವಸ್ತುಗಳು, ಟಬ್ಬುಗಳು ಬಕೆಟ್ ಗಳು ಇತ್ಯಾದಿ ಗಳಲ್ಲಿ ನೀರು ಸಂಗ್ರಹವಾಗಿರುವ ಬಗ್ಗೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಯಿತು.

ಡೆಂಗ್ಯೂ ಮಲೇರಿಯಾ ಇದರ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ಬಗ್ಗೆ ಮುನ್ನೆಚ್ಚರಿಕ ಕ್ರಮವಾಗಿ ಪರಿಶೀಲನೆ ನಡೆಸಿ ಜನರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಂಜೀವಿನಿ ಒಕ್ಕೂಟದ ಶ್ರೀಮತಿ ಚಂದ್ರವತಿ, ಶ್ರೀಮತಿ ವೀಣಾ, ಗ್ರಂಥಪಾಲಕರದ ಶ್ರೀಮತಿ ಮಂಜುಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.366 ಕೋಟಿ ವಾರ್ಷಿಕ ವ್ಯವಹಾರ, ರೂ.1ಕೋಟಿ 64 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ 16 ಡಿವಿಡೆಂಟ್

Suddi Udaya

ಟೀಮ್ ದೇವರಗುಡ್ಡೆ ವತಿಯಿಂದ ಮಕ್ಕಳ ದಿನಾಚರಣೆ ಪ್ರಯುಕ್ತ ಅಂಗನವಾಡಿಗೆ ಚೇರ್ ವಿತರಣೆ

Suddi Udaya

ಬಳಂಜದಲ್ಲಿ ಗುಡ್ಡ ಕುಸಿತ, ಕುಸಿಯುವ ಭೀತಿಯಲ್ಲಿ ಮನೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!