25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

ಉಜಿರೆ: “ನಾನು ವಿದ್ಯೆ ಕಲಿಯಲು ಸೌಲಭ್ಯ, ಅವಕಾಶ ಇರಲಿಲ್ಲ. ಹಾಗಾಗಿ ಪ್ರತಿಭಾನ್ವಿತ ಅರ್ಹ ವಿದ್ಯಾರ್ಥಿಗಳು ವಿದ್ಯೆ ಕಲಿಯಬೇಕು, ಅವರ ಕನಸು ನನಸಾಗಿಸಲು ಶ್ರಮವಹಿಸುತ್ತಿದ್ದೇನೆ .ಮತ್ತು ಇದರಿಂದ ಸಾರ್ಥಕತೆ ನನ್ನ ಪಾಲಾಗಿದೆ” ಎಂದು ‘ಬದುಕು ಕಟ್ಟೋಣ ಬನ್ನಿ’ ತಂಡದ ಸಂಚಾಲಕ ಮೋಹನ್ ಕುಮಾರ್ ಹೇಳಿದರು.

ಅವರು ಉಜಿರೆಯ ಓಷ್ಯನ್ ಪರ್ಲ್‌ನ ಸಭಾಂಗಣದಲ್ಲಿ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದೊಂದಿಗೆ ಬದುಕು ಕಟ್ಟೋಣ ಬನ್ನಿ ತಂಡ ಆಯೋಜಿಸಿದ ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.

ಬದುಕು ಕಟ್ಟೋಣ ಬನ್ನಿ ಸಂಸ್ಥೆ ಪ್ರಾರಂಭವಾದ ನಂತರದ ಯಶಸ್ವಿ ಸೇವೆಗಳು, ಫಲಶೃತಿ ಮತ್ತು ಅನೇಕ ಕಾರ್ಯಕ್ರಮಗಳ ಕುರಿತು ವಿಡಿಯೋ ತುಣುಕುಗಳನ್ನು ಪ್ರದರ್ಶಿಸಿದ ನಂತರ ಮಾತನಾಡಿದ ಶ್ರೀಯುತ ಮೋಹನ್ ಕುಮಾರ್ “ಕನ್ನಡ ಶಾಲೆಯ ಅಭಿವೃದ್ಧಿಗಾಗಿ ಆರಂಭಿಸಿದ ಕೆಲಸ ಬಹಳ ಯಶಸ್ವಿಯಾಗಿದೆ.ವಿದ್ಯೆ ಕಲಿಯದಿದ್ದರೂ ಸಮಾಜಕ್ಕೆ ಮಾದರಿ ಆಗಬೇಕು ಎನ್ನುವ ನನ್ನ ಕನಸು ನನಸಾಗಿದೆ. ಈಗ ಮಕ್ಕಳ ಕನಸನ್ನು ನನಸಾಗಿಸುವ ಹಾದಿಯಲ್ಲಿ ನಾನಿದ್ದೇನೆ.” ಎಂದರು.

ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ “ಎಷ್ಟೋ ಜನರ ಬಾಳಿಗೆ ಮೋಹನ್ ಕುಮಾರ್ ಆಶಾಕಿರಣವಾಗಿದ್ದಾರೆ.ಮಾನವೀಯತೆಯನ್ನು ಮರೆಯುತ್ತಿರುವ ಈ ಸಮಾಜದಲ್ಲಿ, ಸ್ಫೂರ್ತಿಯ ಬದುಕು ಇವರದ್ದಾಗಿದೆ.ಉನ್ನತ ಸಮಾಜವನ್ನು ಕಟ್ಟುವಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಪ್ರಶಂಸನೀಯ” ಎಂದು ಶುಭನುಡಿಗಳನ್ನಾಡಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್., ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡಲ್ಪಟ್ಟ ವಿದ್ಯಾರ್ಥಿ ನಿಧಿಗೆ ಅರ್ಹರಾದ ಸ್ವಯಂಸೇವಕರ ಹೆಸರನ್ನು ವಾಚಿಸಿದರು. ಸಂಧ್ಯಾ ಟ್ರೇಡರ್ಸ್‌ನ ಮಾಲೀಕ ರಾಜೇಶ್ ಪೈ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ವೇದಿಕೆಯಲ್ಲಿ ಎನ್‌ಎಸ್‌ಎಸ್‌ನ ಹಿರಿಯ ಯೋಜನಾಧಿಕಾರಿ ಡಾ. ಲಕ್ಷ್ಮೀನಾರಾಯಣ ಕೆ.ಎಸ್., ಯೋಜನಾಧಿಕಾರಿ ಪ್ರೊ. ದೀಪಾ ಆರ್.ಪಿ., ಆರ್‌ಎಂ. ಅರ್ಥ್ ಮೂವರ್ಸ್, ಉಜಿರೆಯ ಮಾಲಕ ರವಿ ಚಕ್ಕಿತ್ತಾಯ ಮತ್ತು ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ಉಪಸ್ಥಿತರಿದ್ದರು.

ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ಗೇರುಕಟ್ಟೆಯಲ್ಲಿ ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ಶುಭಾರಂಭ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!