25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

ಉಜಿರೆ: “ನಾನು ವಿದ್ಯೆ ಕಲಿಯಲು ಸೌಲಭ್ಯ, ಅವಕಾಶ ಇರಲಿಲ್ಲ. ಹಾಗಾಗಿ ಪ್ರತಿಭಾನ್ವಿತ ಅರ್ಹ ವಿದ್ಯಾರ್ಥಿಗಳು ವಿದ್ಯೆ ಕಲಿಯಬೇಕು, ಅವರ ಕನಸು ನನಸಾಗಿಸಲು ಶ್ರಮವಹಿಸುತ್ತಿದ್ದೇನೆ .ಮತ್ತು ಇದರಿಂದ ಸಾರ್ಥಕತೆ ನನ್ನ ಪಾಲಾಗಿದೆ” ಎಂದು ‘ಬದುಕು ಕಟ್ಟೋಣ ಬನ್ನಿ’ ತಂಡದ ಸಂಚಾಲಕ ಮೋಹನ್ ಕುಮಾರ್ ಹೇಳಿದರು.

ಅವರು ಉಜಿರೆಯ ಓಷ್ಯನ್ ಪರ್ಲ್‌ನ ಸಭಾಂಗಣದಲ್ಲಿ ಎಸ್‌ಡಿಎಂ ಕಾಲೇಜಿನ ಎನ್‌ಎಸ್‌ಎಸ್ ಘಟಕದ ಸಹಯೋಗದೊಂದಿಗೆ ಬದುಕು ಕಟ್ಟೋಣ ಬನ್ನಿ ತಂಡ ಆಯೋಜಿಸಿದ ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.

ಬದುಕು ಕಟ್ಟೋಣ ಬನ್ನಿ ಸಂಸ್ಥೆ ಪ್ರಾರಂಭವಾದ ನಂತರದ ಯಶಸ್ವಿ ಸೇವೆಗಳು, ಫಲಶೃತಿ ಮತ್ತು ಅನೇಕ ಕಾರ್ಯಕ್ರಮಗಳ ಕುರಿತು ವಿಡಿಯೋ ತುಣುಕುಗಳನ್ನು ಪ್ರದರ್ಶಿಸಿದ ನಂತರ ಮಾತನಾಡಿದ ಶ್ರೀಯುತ ಮೋಹನ್ ಕುಮಾರ್ “ಕನ್ನಡ ಶಾಲೆಯ ಅಭಿವೃದ್ಧಿಗಾಗಿ ಆರಂಭಿಸಿದ ಕೆಲಸ ಬಹಳ ಯಶಸ್ವಿಯಾಗಿದೆ.ವಿದ್ಯೆ ಕಲಿಯದಿದ್ದರೂ ಸಮಾಜಕ್ಕೆ ಮಾದರಿ ಆಗಬೇಕು ಎನ್ನುವ ನನ್ನ ಕನಸು ನನಸಾಗಿದೆ. ಈಗ ಮಕ್ಕಳ ಕನಸನ್ನು ನನಸಾಗಿಸುವ ಹಾದಿಯಲ್ಲಿ ನಾನಿದ್ದೇನೆ.” ಎಂದರು.

ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಮಾತನಾಡಿ “ಎಷ್ಟೋ ಜನರ ಬಾಳಿಗೆ ಮೋಹನ್ ಕುಮಾರ್ ಆಶಾಕಿರಣವಾಗಿದ್ದಾರೆ.ಮಾನವೀಯತೆಯನ್ನು ಮರೆಯುತ್ತಿರುವ ಈ ಸಮಾಜದಲ್ಲಿ, ಸ್ಫೂರ್ತಿಯ ಬದುಕು ಇವರದ್ದಾಗಿದೆ.ಉನ್ನತ ಸಮಾಜವನ್ನು ಕಟ್ಟುವಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಪ್ರಶಂಸನೀಯ” ಎಂದು ಶುಭನುಡಿಗಳನ್ನಾಡಿದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್., ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡಲ್ಪಟ್ಟ ವಿದ್ಯಾರ್ಥಿ ನಿಧಿಗೆ ಅರ್ಹರಾದ ಸ್ವಯಂಸೇವಕರ ಹೆಸರನ್ನು ವಾಚಿಸಿದರು. ಸಂಧ್ಯಾ ಟ್ರೇಡರ್ಸ್‌ನ ಮಾಲೀಕ ರಾಜೇಶ್ ಪೈ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ವೇದಿಕೆಯಲ್ಲಿ ಎನ್‌ಎಸ್‌ಎಸ್‌ನ ಹಿರಿಯ ಯೋಜನಾಧಿಕಾರಿ ಡಾ. ಲಕ್ಷ್ಮೀನಾರಾಯಣ ಕೆ.ಎಸ್., ಯೋಜನಾಧಿಕಾರಿ ಪ್ರೊ. ದೀಪಾ ಆರ್.ಪಿ., ಆರ್‌ಎಂ. ಅರ್ಥ್ ಮೂವರ್ಸ್, ಉಜಿರೆಯ ಮಾಲಕ ರವಿ ಚಕ್ಕಿತ್ತಾಯ ಮತ್ತು ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸ್ವಯಂಸೇವಕರು ಉಪಸ್ಥಿತರಿದ್ದರು.

ಸಮೀಕ್ಷಾ ಶಿರ್ಲಾಲು ಕಾರ್ಯಕ್ರಮ ನಿರೂಪಿಸಿದರು.

Related posts

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya

ಮತದಾರರ ಜಾಗೃತಿ ಆಂದೋಲನ: ಕಾಲ್ನಡಿಗೆ ಜಾಥಾ ಚುನಾವಣೆ – ನಮ್ಮ ಹೊಣೆ ಬೀದಿ ನಾಟಕ ಪ್ರದರ್ಶನ

Suddi Udaya

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಮಾನಸಿಕ ಹಾಗೂ ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!