23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ಅತ್ಯಾಧುನಿಕ ಸಿ-ಆರ್ಮ್ ಯಂತ್ರಕ್ಕೆ ಚಾಲನೆ

ಉಜಿರೆ: ಡಾ. ಡಿ ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಮಾತೃಶ್ರೀ ಹೇಮಾವತಿ ಹೆಗ್ಗಡೆ ಹಾಗೂ ಹರ್ಷೇಂದ್ರ ಕುಮಾರ್ ಮಾರ್ಗದರ್ಶನದಲ್ಲಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 22.5 ಲಕ್ಷ ರೂಪಾಯಿ ಮೌಲ್ಯದ ಹೊಸ ಸೀಮೇನ್ಸ್ ಸಿಯೋಸ್ ಫಿಟ್ ಮೊಬೈಲ್ ಸಿ-ಆರ್ಮ್ ಯಂತ್ರವನ್ನು ಜು.17 ರಂದು ಅಳವಡಿಸಿ ಚಾಲನೆ ನೀಡಲಾಯಿತು.


ಸೀಮೇನ್ಸ್ ಸಿಯೋಸ್ ಫಿಟ್ ಮೊಬೈಲ್ ಸಿ-ಆರ್ಮ್ ಯಂತ್ರದ ಬಗ್ಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ಮಾತನಾಡಿ ಸೀಮೇನ್ಸ್ ಸಿಯೋಸ್ ಫಿಟ್ ಮೊಬೈಲ್ ಸಿ-ಆರ್ಮ್ ಯಂತ್ರ ಎಕ್ಸ್-ರೇ ತಂತ್ರಜ್ಞಾನವನ್ನು ಆಧರಿಸಿದ ಸುಧಾರಿತ ವೈದ್ಯಕೀಯ ಚಿತ್ರಣವನ್ನು ಕೊಡಬಲ್ಲ ಸಾಧನವಾಗಿದೆ. ಮಂಗಳೂರಿನ ಕೆಲವು ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಿರುವ ಈ ಯಂತ್ರ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಬಾರಿಗೆ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅಳವಡಿಸಲಾಗಿದೆ.


ಈ ಯಂತ್ರ ಶಕ್ತಿಯುತ ಅತ್ಯಾಧುನಿಕ ಇಮೇಜಿಂಗ್, ನವೀನ ಟಚ್ ಮತ್ತು ಪ್ಲೇ ತಂತ್ರಜ್ಞಾನ ಹೊಂದಿದೆ. ಇದರಲ್ಲಿರುವ ಹೊಸ ತಂತ್ರಜ್ಞಾನದೊಂದಿಗೆ ದೃಶ್ಯಚಿತ್ರಗಳು ಹೆಚ್ಚು ವಿಕಸನಗೊಳ್ಳುತ್ತಿರುವ ದೃಶ್ಯಗಳನ್ನು ಕೊಡಬಲ್ಲ ಸಾಧನವಾಗಿದ್ದು, ಸೂಕ್ತವಾದ ವೈದ್ಯಕೀಯ ಫಲಿತಾಂಶಗಳ ಸಾಧನೆಗೆ ನೆರವಾಗುತ್ತದೆ.


ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 4 ಮಂದಿ ಮುಳೆ ಶಸ್ತ್ರಚಿಕಿತ್ಸಾ ತಜ್ಞರಿದ್ದು, ಇಲ್ಲಿ ಈಗಾಗಲೇ ಹಲವಾರು ಟೋಟಲ್ ನೀ ರಿಪ್ಲೇಸ್‌ಮೆಂಟ್ ಟೋಟಲ್ ಹಿಪ್ ರಿಪ್ಲೇಸ್‌ಮೆಂಟ್ ಹಾಗೂ ಮೂಳೆ ಮತ್ತು ಕೀಲುಗಳ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಪ್ರಸ್ತುತ ಅಳವಡಿಸಿರುವ ಈ ಯಂತ್ರ ಸೊಂಟ ಮತ್ತು ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ, ಗ್ಯಾಸ್ಟ್ರೋ ಕರುಳಿನ ಚಿಕಿತ್ಸೆ, ಎಂಡೋಸ್ಕೋಪಿಕ್, ಮೂತ್ರಶಾಸ್ತ್ರ, ನರಸಂಬಂಧಿ ಖಾಯಿಲೆ, ಹೃದಯದ ಶಸ್ತ್ರಚಿಕಿತ್ಸೆಯಲ್ಲಿ ಈ ಯಂತ್ರ ಅತೀ ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.

Related posts

ಎಸ್ ಎಸ್ ಎಲ್ ಸಿ: ರಾಜ್ಯಕ್ಕೆ 4 ಸ್ಥಾನ. ಪಡೆದಿರುವ ಚಿರಾಗ್ ನಾಯಕ್ ನನ್ನು ಶಾಲಾ ಶಿಕ್ಷಣ ಇಲಾಖೆಯಿಂದಸನ್ಮಾನ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಖಂಡನೆ: ಜಿಲ್ಲಾ ಬಂದ್‌ಗೆ ಹಿಂದೂ ಸಂಘಟನೆಗಳ ಕರೆ : ಬೆಳ್ತಂಗಡಿ ತಾಲೂಕಿನ ಪೇಟೆಗಳಲ್ಲಿ ಭಾಗಶಃ ಅಂಗಡಿ-ಮುಂಗಟ್ಟುಗಳು ಬಂದ್

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya

ಡಾ. ಶಿವರಾಮ ಕಾರಂತ ಪ್ರಶಸ್ತಿಗೆ ಕಾಶಿಪಟ್ಣ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಫುದುವೆಟ್ಟು : ಮರಳು ಅಡ್ಡೆ ಮೇಲೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya
error: Content is protected !!