38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗಿದ್ದು. ಈಡಿಸ್ ಸೊಳ್ಳೆ ಉತ್ಪತ್ತಿಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಡೆಂಗ್ಯೂ ಜ್ವರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ಡೆಂಗ್ಯೂ ನಿಯಂತ್ರಣ ಮಾಡುವ ಬಗ್ಗೆ ಲಾರ್ವಾ ಉತ್ಪತ್ತಿ ತಾಣಗಳ ನಾಶದ ಬಗ್ಗೆ ಡ್ರೈ ಡೇ ಮುಂಜಾಗ್ರತ ಕ್ರಮವಾಗಿ ಧರ್ಮಸ್ಥಳ ಗ್ರಾಮದ ಜನತಾ ಕಾಲೋನಿಗಳಿಗೆ, ಜನ ಬಿಡದಿ ಪ್ರದೇಶಗಳಲ್ಲಿ, ಮನೆಗಳಿಗೆ ಭೇಟಿ ನೀಡಿ ಕಟ್ಟಡದ ಮೇಲ್ಚಾವಣಿ ಗಿಡದ ಚಟ್ಟಿ, ನಿರುಪಯುಕ್ತ ವಸ್ತುಗಳು, ಟಬ್ಬುಗಳು ಬಕೆಟ್ ಗಳು ಇತ್ಯಾದಿ ಗಳಲ್ಲಿ ನೀರು ಸಂಗ್ರಹವಾಗಿರುವ ಬಗ್ಗೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಯಿತು.

ಡೆಂಗ್ಯೂ ಮಲೇರಿಯಾ ಇದರ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ಬಗ್ಗೆ ಮುನ್ನೆಚ್ಚರಿಕ ಕ್ರಮವಾಗಿ ಪರಿಶೀಲನೆ ನಡೆಸಿ ಜನರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಂಜೀವಿನಿ ಒಕ್ಕೂಟದ ಶ್ರೀಮತಿ ಚಂದ್ರವತಿ, ಶ್ರೀಮತಿ ವೀಣಾ, ಗ್ರಂಥಪಾಲಕರದ ಶ್ರೀಮತಿ ಮಂಜುಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಸುಣ್ಣದಕೆರೆ -ಶಕ್ತಿನಗರ ಸಂಪರ್ಕ ರಸ್ತೆ ದುರಸ್ಥಿಗೆ ಕುವೆಟ್ಟು ಗ್ರಾ.ಪಂ. ಸದಸ್ಯರಿಂದ ಆಗ್ರಹ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇ.ಸಿ. ವಿಭಾಗದಿಂದ ಸರ್ಕ್ಯೂಟ್ ಎಕ್ಸ್ ಪೋ 2024

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬಂದಾರು: ಮನೆ ಮೇಲೆ ಕುಸಿದು ಬಿದ್ದ ಧರೆ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya
error: Content is protected !!