September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ

ಧರ್ಮಸ್ಥಳ ಗ್ರಾ.ಪಂ. ಯಿಂದ ಡೆಂಗ್ಯೂ ಸಾಂಕ್ರಾಮಿಕ ರೋಗ ತಡೆಗಟ್ಟುವ ಬಗ್ಗೆ ಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.

ಜಿಲ್ಲಾಧಿಕಾರಿಯವರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬರುತ್ತಿರುವುದರಿಂದ ಅಲ್ಲಲ್ಲಿ ಮಳೆ ನೀರು ಸಂಗ್ರಹವಾಗಿ ಸೊಳ್ಳೆ ಉತ್ಪತ್ತಿ ತಾಣಗಳ ಸಂಖ್ಯೆಯು ಹೆಚ್ಚಾಗಿದ್ದು. ಈಡಿಸ್ ಸೊಳ್ಳೆ ಉತ್ಪತ್ತಿಯಲ್ಲಿ ಗಣನೀಯವಾಗಿ ಏರಿಕೆಯಾಗಿರುವ ಕಾರಣ ಡೆಂಗ್ಯೂ ಜ್ವರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ, ಡೆಂಗ್ಯೂ ನಿಯಂತ್ರಣ ಮಾಡುವ ಬಗ್ಗೆ ಲಾರ್ವಾ ಉತ್ಪತ್ತಿ ತಾಣಗಳ ನಾಶದ ಬಗ್ಗೆ ಡ್ರೈ ಡೇ ಮುಂಜಾಗ್ರತ ಕ್ರಮವಾಗಿ ಧರ್ಮಸ್ಥಳ ಗ್ರಾಮದ ಜನತಾ ಕಾಲೋನಿಗಳಿಗೆ, ಜನ ಬಿಡದಿ ಪ್ರದೇಶಗಳಲ್ಲಿ, ಮನೆಗಳಿಗೆ ಭೇಟಿ ನೀಡಿ ಕಟ್ಟಡದ ಮೇಲ್ಚಾವಣಿ ಗಿಡದ ಚಟ್ಟಿ, ನಿರುಪಯುಕ್ತ ವಸ್ತುಗಳು, ಟಬ್ಬುಗಳು ಬಕೆಟ್ ಗಳು ಇತ್ಯಾದಿ ಗಳಲ್ಲಿ ನೀರು ಸಂಗ್ರಹವಾಗಿರುವ ಬಗ್ಗೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲಾಯಿತು.

ಡೆಂಗ್ಯೂ ಮಲೇರಿಯಾ ಇದರ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ಬಗ್ಗೆ ಮುನ್ನೆಚ್ಚರಿಕ ಕ್ರಮವಾಗಿ ಪರಿಶೀಲನೆ ನಡೆಸಿ ಜನರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯಿತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಉಮೇಶ್ ಕೆ, ಲೆಕ್ಕ ಸಹಾಯಕರಾದ ಶ್ರೀಮತಿ ಪ್ರಮೀಳಾ, ಸಂಜೀವಿನಿ ಒಕ್ಕೂಟದ ಶ್ರೀಮತಿ ಚಂದ್ರವತಿ, ಶ್ರೀಮತಿ ವೀಣಾ, ಗ್ರಂಥಪಾಲಕರದ ಶ್ರೀಮತಿ ಮಂಜುಳಾ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಎನ್.ಎಂ.ಎಂ.ಎಸ್ ವಿದ್ಯಾರ್ಥಿ ವೇತನ ಪರೀಕ್ಷೆ: ಹೊಕ್ಕಾಡಿಗೋಳಿ ಸ.ಉ.ಪ್ರಾ ಶಾಲೆಯ ವಿದ್ಯಾರ್ಥಿ ರೈಶಾ ಸುಹಾನ ರಿಗೆ ಉತ್ತಮ ಅಂಕ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya
error: Content is protected !!