30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮವು ಜು.20 ರಂದು ಸಂತ ಜಾನರ್ ಹಿರಿಯ ಪ್ರಾಥಮಿಕ ಶಾಲೆ ಕೌಕ್ರಾಡಿ ( ಕೊಕ್ಕಡ ) ಎಂಬಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅದ್ವಿತ್ ಜೈನ್ ಜೆಸಿ ವಾಣಿ ವಾಚಿಸಿದರು. ಸಂಚಾಲಕರಾದ ವಂ. ಫಾ. ಅನಿಲ್ ಪ್ರಕಾಶ್ ಡಿ ಸಿಲ್ವಾ ಉದ್ಘಾಟಿಸಿ ಶುಭ ಹಾರೈಸಿದರು. ಜೆಸಿಂತಾ ಡಿಸೋಜ ಹಾಗೂ ಶೋಭಾ ಪಿ ಅವರು ಅತಿಥಿಗಳನ್ನು ಪರಿಚಯಿಸಿದರು.

ಮುಖ್ಯ ಶಿಕ್ಷಕಿ ಜೆನೆವಿವ್ ಫೆರ್ನಾಂಡಿಸ್ ವಿಜೇತ ಮಕ್ಕಳ ವಿವರವಿತ್ತರು, ಪುತ್ತೂರಿನ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಪ್ರವೀಣ್ ವರ್ಣಕುಟೀರ ನೇತೃತ್ವದಲ್ಲಿ ಸುಮಾರು 50 ಮಕ್ಕಳಿಗೆ ಚಿತ್ರಕಲೆ ತರಬೇತಿ ನಡೆಸಲಾಯಿತು. ಗ್ರೀಟಿಂಗ್ಸ್ ತಯಾರಿ, ಮಾರ್ಬಲ್ ಆರ್ಟ್ಸ್, ಪೈಯಿಂಟ್ಸ್ ಕುರಿತು ತರಬೇತಿ ಜೆಸಿ ವತಿಯಿಂದ ಶಿಬಿರವನ್ನು ಆಯೋಜಿಸಲಾಯಿತ್ತು, ಹಲವು ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು, ಜೋಸೆಫ್ ಪಿರೇರ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು, ನಿಕಟ ಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರ, ಯುವ ಜೆಸಿ ಅಧ್ಯಕ್ಷ ಹರ್ಷಿತ್, ಮಕ್ಕಳ ಜೆಸಿ ಅಧ್ಯಕ್ಷ ವಿವಿಯನ್ ಸುವಾರಿಸ್, ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜೆ ಸಿ ವತಿಯಿಂದ ಪೂರ್ವಭಾವಿ ಸಾಮಾನ್ಯ ಸಭೆ ನಡೆಸಲಾಯಿತು, ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಎ.20: ಸಿಬಿಕೆ ಕಪ್-2025 ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya

ನಿಯಂತ್ರಣ ತಪ್ಪಿ ಆಪೆ ರಿಕ್ಷಾ ಪಲ್ಟಿ: ಪ್ರಯಾಣಿಕರಿಗೆ ಗಾಯ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya
error: Content is protected !!