26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮವು ಜು.20 ರಂದು ಸಂತ ಜಾನರ್ ಹಿರಿಯ ಪ್ರಾಥಮಿಕ ಶಾಲೆ ಕೌಕ್ರಾಡಿ ( ಕೊಕ್ಕಡ ) ಎಂಬಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅದ್ವಿತ್ ಜೈನ್ ಜೆಸಿ ವಾಣಿ ವಾಚಿಸಿದರು. ಸಂಚಾಲಕರಾದ ವಂ. ಫಾ. ಅನಿಲ್ ಪ್ರಕಾಶ್ ಡಿ ಸಿಲ್ವಾ ಉದ್ಘಾಟಿಸಿ ಶುಭ ಹಾರೈಸಿದರು. ಜೆಸಿಂತಾ ಡಿಸೋಜ ಹಾಗೂ ಶೋಭಾ ಪಿ ಅವರು ಅತಿಥಿಗಳನ್ನು ಪರಿಚಯಿಸಿದರು.

ಮುಖ್ಯ ಶಿಕ್ಷಕಿ ಜೆನೆವಿವ್ ಫೆರ್ನಾಂಡಿಸ್ ವಿಜೇತ ಮಕ್ಕಳ ವಿವರವಿತ್ತರು, ಪುತ್ತೂರಿನ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಪ್ರವೀಣ್ ವರ್ಣಕುಟೀರ ನೇತೃತ್ವದಲ್ಲಿ ಸುಮಾರು 50 ಮಕ್ಕಳಿಗೆ ಚಿತ್ರಕಲೆ ತರಬೇತಿ ನಡೆಸಲಾಯಿತು. ಗ್ರೀಟಿಂಗ್ಸ್ ತಯಾರಿ, ಮಾರ್ಬಲ್ ಆರ್ಟ್ಸ್, ಪೈಯಿಂಟ್ಸ್ ಕುರಿತು ತರಬೇತಿ ಜೆಸಿ ವತಿಯಿಂದ ಶಿಬಿರವನ್ನು ಆಯೋಜಿಸಲಾಯಿತ್ತು, ಹಲವು ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು, ಜೋಸೆಫ್ ಪಿರೇರ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು, ನಿಕಟ ಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರ, ಯುವ ಜೆಸಿ ಅಧ್ಯಕ್ಷ ಹರ್ಷಿತ್, ಮಕ್ಕಳ ಜೆಸಿ ಅಧ್ಯಕ್ಷ ವಿವಿಯನ್ ಸುವಾರಿಸ್, ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜೆ ಸಿ ವತಿಯಿಂದ ಪೂರ್ವಭಾವಿ ಸಾಮಾನ್ಯ ಸಭೆ ನಡೆಸಲಾಯಿತು, ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಜು.19: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದಿಂದ “ಕನಸು ಇದು ಭರವಸೆಯ ಬೆಳಕು”: ವಿದ್ಯಾರ್ಥಿಗಳೊಂದಿಗೆ 78 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಹೆದ್ದಾರಿಯ ಅಗಲೀಕರಣ ಪರಿಹಾರಧನ ಪಡೆದಮನೆ, ಕಟ್ಟಡಗಳ ತೆರಿಗೆ ರದ್ದು ಪಡಿಸಲು ಸೂಚನೆ

Suddi Udaya

ಗುರುವಾಯನಕೆರೆ ಸ.ಪ್ರೌ. ಶಾಲೆಯ ಚಿತ್ರಕಲಾ ಶಿಕ್ಷಕ ವಿ.ಕೆ ವಿಟ್ಲ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya
error: Content is protected !!