23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ.

ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ಆ.15ರಿಂದ ಭೇಟಿ ನೀಡುವಂತಹ ಪುರುಷರು ಕಡ್ಡಾಯವಾಗಿ ಧೋತಿ ಅಥವಾ ಪಂಚೆ, ಶಲ್ಯ ಧರಿಸಿ ಬರಬೇಕಿದೆ. ಮಹಿಳೆಯರು ಸೀರೆ, ಚೂಡಿದಾರ್, ಪೈಜಾಮ, ದುಪ್ಪಟ್ಟದೊಂದಿಗೆ ಅಥವಾ ಲಂಗಾ-ದಾವಣಿ ಧರಿಸಿ ತೆರಳಿದ್ರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಪ್ರವೇಶ ನಿಷೇಧ, ಹೊರಗಡೆಯಿಂದಲೇ ದರ್ಶನ ಪಡೆಯಬಹುದಾಗಿದೆ.

Related posts

ಚಿನ್ನದ ಕರಿಮಣಿ ಸರ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಬೆಳಾಲು ಕೊಡೋಳುಕೆರೆ ಕಾಡಿನಲ್ಲಿ ಹೆಣ್ಣು ಮಗು ಪತ್ತೆ ಪ್ರಕರಣ: ಮಗುವಿನ ಪೋಷಕರನ್ನು ಪತ್ತೆಹಚ್ಚಿದ ಪೊಲೀಸರು

Suddi Udaya

ಕೊಕ್ಕಡ: ಉಪ್ಪಾರಪಳಿಕೆ ವಿ.ಹಿಂ.ಪ. ಭಜರಂಗದಳ ಮತ್ತು ಶ್ರದ್ಧಾ ಗೆಳೆಯರ ಬಳಗದ ವತಿಯಿಂದ ಗೋಪೂಜೆ ಹಾಗೂ ದೋಸೆ ಹಬ್ಬ

Suddi Udaya

ಪೆರ್ಲ ಬೈಪಾಡಿ ಸ.ಹಿ.ಪ್ರಾ.ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ನಿಡ್ಲೆ: ಬರೆಂಗಾಯ ಪುಳಿತ್ತಡಿ ನಿವಾಸಿ ನಾರಾಯಣ ರೈ ನಿಧನ

Suddi Udaya
error: Content is protected !!