September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ.

ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ಆ.15ರಿಂದ ಭೇಟಿ ನೀಡುವಂತಹ ಪುರುಷರು ಕಡ್ಡಾಯವಾಗಿ ಧೋತಿ ಅಥವಾ ಪಂಚೆ, ಶಲ್ಯ ಧರಿಸಿ ಬರಬೇಕಿದೆ. ಮಹಿಳೆಯರು ಸೀರೆ, ಚೂಡಿದಾರ್, ಪೈಜಾಮ, ದುಪ್ಪಟ್ಟದೊಂದಿಗೆ ಅಥವಾ ಲಂಗಾ-ದಾವಣಿ ಧರಿಸಿ ತೆರಳಿದ್ರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಪ್ರವೇಶ ನಿಷೇಧ, ಹೊರಗಡೆಯಿಂದಲೇ ದರ್ಶನ ಪಡೆಯಬಹುದಾಗಿದೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಬೀಜ ಉಂಡೆಗಳ ಮೂಲಕ ಪ್ರಕೃತಿ ಸಂರಕ್ಷಣೆಯ ಅರಿವು

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ – ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಮೋಹನ ಆಳ್ವ ಅವರ ತಂದೆ, ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ನಿಧನ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಎಸ್‌ಎಂವೈಎಂ ವತಿಯಿಂದ ಪಂಚಾಯತ್‌ಗೆ ಡಸ್ಟ್‌ಬಿನ್ ವಿತರಣೆ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!