22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮವು ಜು.20 ರಂದು ಸಂತ ಜಾನರ್ ಹಿರಿಯ ಪ್ರಾಥಮಿಕ ಶಾಲೆ ಕೌಕ್ರಾಡಿ ( ಕೊಕ್ಕಡ ) ಎಂಬಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅದ್ವಿತ್ ಜೈನ್ ಜೆಸಿ ವಾಣಿ ವಾಚಿಸಿದರು. ಸಂಚಾಲಕರಾದ ವಂ. ಫಾ. ಅನಿಲ್ ಪ್ರಕಾಶ್ ಡಿ ಸಿಲ್ವಾ ಉದ್ಘಾಟಿಸಿ ಶುಭ ಹಾರೈಸಿದರು. ಜೆಸಿಂತಾ ಡಿಸೋಜ ಹಾಗೂ ಶೋಭಾ ಪಿ ಅವರು ಅತಿಥಿಗಳನ್ನು ಪರಿಚಯಿಸಿದರು.

ಮುಖ್ಯ ಶಿಕ್ಷಕಿ ಜೆನೆವಿವ್ ಫೆರ್ನಾಂಡಿಸ್ ವಿಜೇತ ಮಕ್ಕಳ ವಿವರವಿತ್ತರು, ಪುತ್ತೂರಿನ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಪ್ರವೀಣ್ ವರ್ಣಕುಟೀರ ನೇತೃತ್ವದಲ್ಲಿ ಸುಮಾರು 50 ಮಕ್ಕಳಿಗೆ ಚಿತ್ರಕಲೆ ತರಬೇತಿ ನಡೆಸಲಾಯಿತು. ಗ್ರೀಟಿಂಗ್ಸ್ ತಯಾರಿ, ಮಾರ್ಬಲ್ ಆರ್ಟ್ಸ್, ಪೈಯಿಂಟ್ಸ್ ಕುರಿತು ತರಬೇತಿ ಜೆಸಿ ವತಿಯಿಂದ ಶಿಬಿರವನ್ನು ಆಯೋಜಿಸಲಾಯಿತ್ತು, ಹಲವು ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು, ಜೋಸೆಫ್ ಪಿರೇರ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು, ನಿಕಟ ಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರ, ಯುವ ಜೆಸಿ ಅಧ್ಯಕ್ಷ ಹರ್ಷಿತ್, ಮಕ್ಕಳ ಜೆಸಿ ಅಧ್ಯಕ್ಷ ವಿವಿಯನ್ ಸುವಾರಿಸ್, ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜೆ ಸಿ ವತಿಯಿಂದ ಪೂರ್ವಭಾವಿ ಸಾಮಾನ್ಯ ಸಭೆ ನಡೆಸಲಾಯಿತು, ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಗೋಳಿಯಂಗಡಿಯಲ್ಲಿ ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಬೆಳಾಲು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಉಜಿರೆ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂಸೇವಕ ಭಾಸ್ಕರ ಆಚಾರ್ಯ ವಿಧಿವಶ

Suddi Udaya

ಸಿಯೋನ್ ಆಶ್ರಮದ ನಿವಾಸಿಗಳಿಗಾಗಿ ಮೂಗ್ ಇಂಡಿಯಾದ ಸಿ ಎಸ್ ಆರ್ ಯೋಜನೆಯಡಿ ಮೌಲ್ಯಮಯ ಕೊಡುಗೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಮೂಡಬಿದ್ರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya
error: Content is protected !!