23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮವು ಜು.20 ರಂದು ಸಂತ ಜಾನರ್ ಹಿರಿಯ ಪ್ರಾಥಮಿಕ ಶಾಲೆ ಕೌಕ್ರಾಡಿ ( ಕೊಕ್ಕಡ ) ಎಂಬಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅದ್ವಿತ್ ಜೈನ್ ಜೆಸಿ ವಾಣಿ ವಾಚಿಸಿದರು. ಸಂಚಾಲಕರಾದ ವಂ. ಫಾ. ಅನಿಲ್ ಪ್ರಕಾಶ್ ಡಿ ಸಿಲ್ವಾ ಉದ್ಘಾಟಿಸಿ ಶುಭ ಹಾರೈಸಿದರು. ಜೆಸಿಂತಾ ಡಿಸೋಜ ಹಾಗೂ ಶೋಭಾ ಪಿ ಅವರು ಅತಿಥಿಗಳನ್ನು ಪರಿಚಯಿಸಿದರು.

ಮುಖ್ಯ ಶಿಕ್ಷಕಿ ಜೆನೆವಿವ್ ಫೆರ್ನಾಂಡಿಸ್ ವಿಜೇತ ಮಕ್ಕಳ ವಿವರವಿತ್ತರು, ಪುತ್ತೂರಿನ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಪ್ರವೀಣ್ ವರ್ಣಕುಟೀರ ನೇತೃತ್ವದಲ್ಲಿ ಸುಮಾರು 50 ಮಕ್ಕಳಿಗೆ ಚಿತ್ರಕಲೆ ತರಬೇತಿ ನಡೆಸಲಾಯಿತು. ಗ್ರೀಟಿಂಗ್ಸ್ ತಯಾರಿ, ಮಾರ್ಬಲ್ ಆರ್ಟ್ಸ್, ಪೈಯಿಂಟ್ಸ್ ಕುರಿತು ತರಬೇತಿ ಜೆಸಿ ವತಿಯಿಂದ ಶಿಬಿರವನ್ನು ಆಯೋಜಿಸಲಾಯಿತ್ತು, ಹಲವು ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು, ಜೋಸೆಫ್ ಪಿರೇರ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು, ನಿಕಟ ಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರ, ಯುವ ಜೆಸಿ ಅಧ್ಯಕ್ಷ ಹರ್ಷಿತ್, ಮಕ್ಕಳ ಜೆಸಿ ಅಧ್ಯಕ್ಷ ವಿವಿಯನ್ ಸುವಾರಿಸ್, ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜೆ ಸಿ ವತಿಯಿಂದ ಪೂರ್ವಭಾವಿ ಸಾಮಾನ್ಯ ಸಭೆ ನಡೆಸಲಾಯಿತು, ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಡಿಕೆಶಿ ಮುಖ್ಯಮಂತ್ರಿ-ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಸಂದ ಜಯ: ಕೆ.ಹರೀಶ್ ಕುಮಾರ್

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಬೆಳ್ತಂಗಡಿ:ಫೆ.21ಮತ್ತು24 ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ: ಪದ್ಮನಾಭ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!