24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ.

ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ಆ.15ರಿಂದ ಭೇಟಿ ನೀಡುವಂತಹ ಪುರುಷರು ಕಡ್ಡಾಯವಾಗಿ ಧೋತಿ ಅಥವಾ ಪಂಚೆ, ಶಲ್ಯ ಧರಿಸಿ ಬರಬೇಕಿದೆ. ಮಹಿಳೆಯರು ಸೀರೆ, ಚೂಡಿದಾರ್, ಪೈಜಾಮ, ದುಪ್ಪಟ್ಟದೊಂದಿಗೆ ಅಥವಾ ಲಂಗಾ-ದಾವಣಿ ಧರಿಸಿ ತೆರಳಿದ್ರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಪ್ರವೇಶ ನಿಷೇಧ, ಹೊರಗಡೆಯಿಂದಲೇ ದರ್ಶನ ಪಡೆಯಬಹುದಾಗಿದೆ.

Related posts

ಸಾವ್ಯ: ಶುಭೋದಯ ಯುವಕ ಮಂಡಲದಿಂದ ಸಾಮೂಹಿಕ ಶ್ರೀ ಶನೈಶ್ವರ ಪೂಜೆ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!