37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ.

ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ಆ.15ರಿಂದ ಭೇಟಿ ನೀಡುವಂತಹ ಪುರುಷರು ಕಡ್ಡಾಯವಾಗಿ ಧೋತಿ ಅಥವಾ ಪಂಚೆ, ಶಲ್ಯ ಧರಿಸಿ ಬರಬೇಕಿದೆ. ಮಹಿಳೆಯರು ಸೀರೆ, ಚೂಡಿದಾರ್, ಪೈಜಾಮ, ದುಪ್ಪಟ್ಟದೊಂದಿಗೆ ಅಥವಾ ಲಂಗಾ-ದಾವಣಿ ಧರಿಸಿ ತೆರಳಿದ್ರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಪ್ರವೇಶ ನಿಷೇಧ, ಹೊರಗಡೆಯಿಂದಲೇ ದರ್ಶನ ಪಡೆಯಬಹುದಾಗಿದೆ.

Related posts

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಆಡಳಿತ ವೈಫಲ್ಯ ಮರೆಮಾಚಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿದ ಸತ್ವಹೀನ ಬಜೆಟ್ : ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ: ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಮೇ 21: ಉತ್ಕೃಷ್ಠ ಸೇವೆಯೊಂದಿಗೆ ಮುನ್ನಡೆಯುತ್ತಿರುವ ಗುರುದೇವ ಸಹಕಾರ ಸಂಘದ ಮೂಡಬಿದಿರೆ ಶಾಖೆ ಶುಭಾರಂಭ

Suddi Udaya

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya
error: Content is protected !!