September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ.

ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ಆ.15ರಿಂದ ಭೇಟಿ ನೀಡುವಂತಹ ಪುರುಷರು ಕಡ್ಡಾಯವಾಗಿ ಧೋತಿ ಅಥವಾ ಪಂಚೆ, ಶಲ್ಯ ಧರಿಸಿ ಬರಬೇಕಿದೆ. ಮಹಿಳೆಯರು ಸೀರೆ, ಚೂಡಿದಾರ್, ಪೈಜಾಮ, ದುಪ್ಪಟ್ಟದೊಂದಿಗೆ ಅಥವಾ ಲಂಗಾ-ದಾವಣಿ ಧರಿಸಿ ತೆರಳಿದ್ರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಪ್ರವೇಶ ನಿಷೇಧ, ಹೊರಗಡೆಯಿಂದಲೇ ದರ್ಶನ ಪಡೆಯಬಹುದಾಗಿದೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಕಾಪಿನಡ್ಕ ಜಿನ್ನಪ್ಪ ಪೂಜಾರಿ ಮರಳಿ ಕಾಂಗ್ರೇಸ್ ಗೆ ಸೇರ್ಪಡೆ

Suddi Udaya

ಮದ್ದಡ್ಕ ಸಮೀಪದ ನೇರಳಕಟ್ಟೆಯಲ್ಲಿ ಬೈಕ್ ಮತ್ತು ಅಕ್ಟೀವಾ ಡಿಕ್ಕಿ: ಸವಾರರು ಪ್ರಾಣಾಪಾಯದಿಂದ ಪಾರು

Suddi Udaya

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಬೆಳ್ತಂಗಡಿ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!