September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ.

ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ಆ.15ರಿಂದ ಭೇಟಿ ನೀಡುವಂತಹ ಪುರುಷರು ಕಡ್ಡಾಯವಾಗಿ ಧೋತಿ ಅಥವಾ ಪಂಚೆ, ಶಲ್ಯ ಧರಿಸಿ ಬರಬೇಕಿದೆ. ಮಹಿಳೆಯರು ಸೀರೆ, ಚೂಡಿದಾರ್, ಪೈಜಾಮ, ದುಪ್ಪಟ್ಟದೊಂದಿಗೆ ಅಥವಾ ಲಂಗಾ-ದಾವಣಿ ಧರಿಸಿ ತೆರಳಿದ್ರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಪ್ರವೇಶ ನಿಷೇಧ, ಹೊರಗಡೆಯಿಂದಲೇ ದರ್ಶನ ಪಡೆಯಬಹುದಾಗಿದೆ.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಜೆಸಿಐ ಉಜಿರೆ ಸಿಟಿ ವತಿಯಿಂದ ಪರಿಸರ ದಿನಾಚರಣೆ- ಗೋ ಗ್ರೀನ್ ಕಾರ್ಯಕ್ರಮ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಬೆಳ್ತಂಗಡಿ ಅಂಬೇಡ್ಕರ್ ಭವನದ ಬಳಿ ಅಸ್ವಸ್ಥಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಕರುಣಾಕರ ಬಂಗೇರ ಹಾಗೂ ಸಾಯಿರಾಂ ಅಂಬುಲೆನ್ಸ್ ಮಾಲಕ ಪವನ್ ಬಂಗೇರ

Suddi Udaya
error: Content is protected !!