25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

ಬೆಳ್ತಂಗಡಿ: ಪ್ರಸಿದ್ಧ ಯಾತ್ರಾ ಸ್ಥಳಗಳಲ್ಲಿ ಒಂದಾದ ಶೃಂಗೇರಿಯ ಶಾರದಾಂಬೆಯ ಶ್ರೀಮಠದಲ್ಲಿ ಹೊಸ ನಿಯಮ ಜಾರಿಯಾಗಲಿದೆ. ಆ.15ರಿಂದ ಇಲ್ಲಿಗೆ ಭೇಟಿ ನೀಡುವಂತ ಪ್ರವಾಸಿಗರು, ಯಾತ್ರಾರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅವುಗಳ ಹೊರತಾಗಿ ಬೇರೆ ಉಡುಪು ಧರಿಸಿ ಬಂದ್ರೆ ಶ್ರೀಮಠಕ್ಕೆ ಎಂಟ್ರಿ ಇರೋದಿಲ್ಲ. ಈ ಬಗ್ಗೆ ಶೃಂಗೇರಿಯ ದಕ್ಷಿಣಾಮ್ನಾಯ ಶ್ರೀಶಾರದಾ ಪೀಠದ ಆಡಳಿತಾಧಿಕಾರಿ ಮತ್ತು ಸಿಇಓ ಪಿ.ಎ ಮುರಳಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಶ್ರೀಮಠ ಶೃಂಗೇರಿಗೆ ಆಗಮಿಸುವ ಎಲ್ಲಾ ಭಕ್ತರು, ಸಾಂಪ್ರದಾಯಿಕ ಭಾರತೀಯ ಉಡುಪುಗಳನ್ನು ಧರಿಸಲು ವಿನಂತಿಸಿದ್ದಾರೆ.

ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ಆ.15ರಿಂದ ಭೇಟಿ ನೀಡುವಂತಹ ಪುರುಷರು ಕಡ್ಡಾಯವಾಗಿ ಧೋತಿ ಅಥವಾ ಪಂಚೆ, ಶಲ್ಯ ಧರಿಸಿ ಬರಬೇಕಿದೆ. ಮಹಿಳೆಯರು ಸೀರೆ, ಚೂಡಿದಾರ್, ಪೈಜಾಮ, ದುಪ್ಪಟ್ಟದೊಂದಿಗೆ ಅಥವಾ ಲಂಗಾ-ದಾವಣಿ ಧರಿಸಿ ತೆರಳಿದ್ರೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಇಲ್ಲವಾದಲ್ಲಿ ಪ್ರವೇಶ ನಿಷೇಧ, ಹೊರಗಡೆಯಿಂದಲೇ ದರ್ಶನ ಪಡೆಯಬಹುದಾಗಿದೆ.

Related posts

ಬೆಳಾಲು ಗ್ರಾ. ಪಂ. ಬಿಲ್ಲು ವಸೂಲಿಗಾರ ಶಶಿಧರ್ ಕರ್ತವ್ಯದಿಂದ ಅಮಾನತು

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ವಿಜ್ಞಾನ ಮಾದರಿಗಳ ಪ್ರದರ್ಶನ ಕಾರ್ಯಕ್ರಮ

Suddi Udaya

ಪಿಲಾತಬೆಟ್ಟುನಲ್ಲಿ ಧರ್ಮಸ್ಥಳ ಪೊಲೀಸ್ ಇಲಾಖೆಯ ಬೊಲೆರೋ ಜೀಪ್‌ ಗೆ ಡಿಕ್ಕಿ ಹೊಡೆದ ಸ್ಕೂಟಿ

Suddi Udaya

ಎಸ್.ಡಿ.ಎಂ ಬಿಎನ್‌ವೈಎಸ್ ಕಾಲೇಜು : ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!