23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ 2024 ಕಾರ್ಯಕ್ರಮವು ಜು.20 ರಂದು ಸಂತ ಜಾನರ್ ಹಿರಿಯ ಪ್ರಾಥಮಿಕ ಶಾಲೆ ಕೌಕ್ರಾಡಿ ( ಕೊಕ್ಕಡ ) ಎಂಬಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಸಂತೋಷ್ ಜೈನ್ ವಹಿಸಿದ್ದರು. ಅದ್ವಿತ್ ಜೈನ್ ಜೆಸಿ ವಾಣಿ ವಾಚಿಸಿದರು. ಸಂಚಾಲಕರಾದ ವಂ. ಫಾ. ಅನಿಲ್ ಪ್ರಕಾಶ್ ಡಿ ಸಿಲ್ವಾ ಉದ್ಘಾಟಿಸಿ ಶುಭ ಹಾರೈಸಿದರು. ಜೆಸಿಂತಾ ಡಿಸೋಜ ಹಾಗೂ ಶೋಭಾ ಪಿ ಅವರು ಅತಿಥಿಗಳನ್ನು ಪರಿಚಯಿಸಿದರು.

ಮುಖ್ಯ ಶಿಕ್ಷಕಿ ಜೆನೆವಿವ್ ಫೆರ್ನಾಂಡಿಸ್ ವಿಜೇತ ಮಕ್ಕಳ ವಿವರವಿತ್ತರು, ಪುತ್ತೂರಿನ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಾದ ಪ್ರವೀಣ್ ವರ್ಣಕುಟೀರ ನೇತೃತ್ವದಲ್ಲಿ ಸುಮಾರು 50 ಮಕ್ಕಳಿಗೆ ಚಿತ್ರಕಲೆ ತರಬೇತಿ ನಡೆಸಲಾಯಿತು. ಗ್ರೀಟಿಂಗ್ಸ್ ತಯಾರಿ, ಮಾರ್ಬಲ್ ಆರ್ಟ್ಸ್, ಪೈಯಿಂಟ್ಸ್ ಕುರಿತು ತರಬೇತಿ ಜೆಸಿ ವತಿಯಿಂದ ಶಿಬಿರವನ್ನು ಆಯೋಜಿಸಲಾಯಿತ್ತು, ಹಲವು ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು, ಜೋಸೆಫ್ ಪಿರೇರ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು, ನಿಕಟ ಪೂರ್ವ ಅಧ್ಯಕ್ಷ ಜಿತೇಶ್ ಎಲ್ ಪಿರೇರ, ಯುವ ಜೆಸಿ ಅಧ್ಯಕ್ಷ ಹರ್ಷಿತ್, ಮಕ್ಕಳ ಜೆಸಿ ಅಧ್ಯಕ್ಷ ವಿವಿಯನ್ ಸುವಾರಿಸ್, ಘಟಕದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು, ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜೆ ಸಿ ವತಿಯಿಂದ ಪೂರ್ವಭಾವಿ ಸಾಮಾನ್ಯ ಸಭೆ ನಡೆಸಲಾಯಿತು, ಕಾರ್ಯದರ್ಶಿ ಅಕ್ಷತ್ ರೈ ವಂದಿಸಿದರು.

Related posts

ಇಂದಬೆಟ್ಟು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ತರಗತಿ ಕಾರ್ಯಕ್ರಮ

Suddi Udaya

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಚಿಬಿದ್ರೆ : ಪೆರಿಯಡ್ಕ ಸಮೀಪದ ಮಾಕಳದಲ್ಲಿ ಕಾಡಾನೆ ದಾಳಿ: ಅಪಾರ ಬೆಳೆ ಹಾನಿ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ವಿರುದ್ದ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್: ವಸಂತ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ವಸಂತ ಬಂಗೇರ ಅಭಿಮಾನಿ ಬಳಗದಿಂದ ಒತ್ತಾಯ: ಸೌಜನ್ಯ ಆತ್ಯಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಸಿಗಬೇಕೆಂಬುದು ವಸಂತ ಬಂಗೇರ ಅಭಿಮಾನಿ ಬಳಗದ ನಿಲುವು

Suddi Udaya
error: Content is protected !!